ಸಡನ್ ಬ್ರೇಕ್ – ಟ್ರ್ಯಾಕ್ಟರ್ ಗೆ ಬೈಕ್ ಡಿಕ್ಕಿ, ಕಾಲು ಅಪ್ಪಚ್ಚಿ

ದಾವಣಗೆರೆ: ಚಲಿಸುತ್ತಿದ್ದಾಗ ಸಡನ್ ಬ್ರೇಕ್ ಹಾಕಿದ ಪರಿಣಾಮ ಹಿಂದೆ ಬರುತ್ತಿದ್ದ ಬೈಕ್ ಸವಾರ ಟ್ರ್ಯಾಕ್ಟರ್ ಗೆ ಡಿಕ್ಕಿಯಾಗಿರುವ ಘಟನೆ ದಾವಣಗೆರೆಯ ಕೈದಾಳೆ ಗ್ರಾಮದ ಬಳಿ ನಡೆದಿದೆ.

ಅಪಘಾತದಲ್ಲಿ ಗಾಯಗೊಂಡ ವಿಜಯೇಂದ್ರಕುಮಾರ್(50) ಎಂದು ಗುರುತಿಸಲಾಗಿದೆ. ಇವರು ಚನ್ನಗಿರಿಯ ನವಿಲೇಹಾಳು ಗ್ರಾಮದ ನಿವಾಸಿಯಾಗಿದ್ದಾರೆ. ಬೈಕ್‍ನಲ್ಲಿ ಸ್ನೇಹಿತನ ಜೊತೆ ದಾವಣಗೆರೆಗೆ ಬರುತ್ತಿರುವಾಗ ಘಟನೆ ನಡೆದಿದೆ.

ಬೈಕ್‍ನಲ್ಲಿ ಸ್ನೇಹಿತನ ಜೊತೆ ದಾವಣಗೆರೆಗೆ ಬರುತ್ತಿದ್ದರು. ಮುಂದೆ ಹೋಗುತ್ತಿದ್ದ ಟ್ರ್ಯಾಕ್ಟರ್ ಸಡನ್ ಬ್ರೇಕ್ ಹಾಕಿದ ಪರಿಣಾಮ ಹಿಂದಿನಿಂದ ಬರುತ್ತಿದ್ದ ಬೈಕ್ ಟ್ರ್ಯಾಕ್ಟರ್ ಗೆ ಡಿಕ್ಕಿಯಾಗಿ ಈ ಅವಘಡ ಸಂಭವಿಸಿದೆ. ವಿಜಯೇಂದ್ರಕುಮಾರ್ ಅವರ ಎಡಗಾಲು ಅಪ್ಪಚ್ಚಿಯಾಗಿದೆ

ಈ ಅಪಘಾತದಲ್ಲಿ ಗಾಯಗೊಂಡು ಗಾಯಾಳುಗಳು ನರಳಾಡುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಹದಡಿ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ.

Comments

Leave a Reply

Your email address will not be published. Required fields are marked *