ಸತ್ಯ-ಅಸತ್ಯತೆಯನ್ನು ಜನತೆಯ ಮುಂದಿಡಿ- ‘ಕೈ’ ಆರೋಪಕ್ಕೆ ಅಪ್ಪಚ್ಚು ರಂಜನ್ ಸಲಹೆ

ಮಡಿಕೇರಿ: ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಅವ್ಯವಹಾರ ನಡೆದಿದೆ. ಎಂದು ವಿರೋಧ ಪಕ್ಷ ಆರೋಪಿಸುತ್ತಿದ್ದು ಈ ಬಗ್ಗೆ ಸರ್ಕಾರ ತನಿಖೆ ನಡೆಸಿ ಸತ್ಯ-ಅಸತ್ಯತೆಯನ್ನು ಜನತೆಯ ಮುಂದೆ ಇಡಬೇಕು ಎಂದು ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಸಲಹೆ ನೀಡಿದ್ದಾರೆ.

ಮಡಿಕೇರಿಯಲ್ಲಿ ಮಾತಾನಾಡಿದ ಅವರು, ವಿರೋಧ ಪಕ್ಷದ ಆರೋಪಗಳಿಗೆ ಅಗತ್ಯವಾದ ಮಾಹಿತಿ ಹಾಗೂ ದಾಖಲೆಗಳನ್ನು ಕೊಡಬೇಕಾಗಿರುವುದು ಆಡಳಿತ ಪಕ್ಷದವಾದ ನಮ್ಮ ಜವಾಬ್ದಾರಿ. ಬಿಜೆಪಿ ಸರ್ಕಾರದ ಮೇಲಿನ ಆರೋಪಕ್ಕೆ ಈಗಾಗಲೇ ಉಪ ಮುಖ್ಯಮಂತ್ರಿ ಅಶೋಕ್ ಸೇರಿದಂತೆ ಹಲವರು ಉತ್ತರವನ್ನು ಕೊಟ್ಟಿದ್ದಾರೆ ಎಂದರು.

ಕೊರೊನಾ ಸಮಯದಲ್ಲಿ 665 ಕೋಟಿ ಖರ್ಚು ಮಾಡಿದ್ದೇವೆ ಎಂದು ಆಡಳಿತ ಪಕ್ಷದ ಸಚಿವರು ಹೇಳುತ್ತಾರೆ. ಮತ್ತೊಂದೆಡೆ ವಿರೋಧ ಪಕ್ಷದವರು 4 ಸಾವಿರ ಕೋಟಿ ಅಂತಾರೆ. ಹೀಗೆ ಇರುವಾಗ 2 ಸಾವಿರ ಕೋಟಿ ಹಣ ದುರುಪಯೋಗವಾಗಲು ಹೇಗೆ ಸಾಧ್ಯ. ಸುಮ್ಮನೆ ಇಲ್ಲ ಸಲ್ಲದ ಆರೋಪಗಳನ್ನು ಮಾಡುವ ಬದಲು ದಾಖಲೆಗಳ ಸಮೇತ ಮಾತನಾಡಬೇಕು ಎಂದು ಅಪ್ಪಚ್ಚು ರಂಜನ್ ಕಿಡಿಕಾರಿದ್ದಾರೆ.

Comments

Leave a Reply

Your email address will not be published. Required fields are marked *