ಸದಾ ನೆನಪಿನಲ್ಲಿಯೇ ಇರ್ತಿಯಾ ಗೆಳೆಯ: ಚಿರು ನೆನೆದ ದಚ್ಚು

ಬೆಂಗಳೂರು: ಸ್ಯಾಂಡಲ್‍ವುಡ್ ನಟ ಯುವ ಸಾಮ್ರಾಟ್ ಚಿರಂಜೀವಿ ಸರ್ಜಾರವರು ಅಗಲಿ ಇಂದಿಗೆ ಒಂದು ವರ್ಷ ಕಳೆದಿದೆ. ಈ ಹಿನ್ನೆಲೆ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್‍ರವರು ಚಿರು ಜೊತೆಗಿರುವ ಫೋಟೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುವ ಮೂಲಕ ಚಿರುರನ್ನು ನೆನಪಿಸಿಕೊಂಡಿದ್ದಾರೆ. ಇದನ್ನು ಓದಿ: ಡಿ ಬಾಸ್ ಮನವಿಗೆ ಭರ್ಜರಿ ಪ್ರತಿಕ್ರಿಯೆ-2 ದಿನದಲ್ಲಿ 25 ಲಕ್ಷ ಸಂಗ್ರಹ

ಕಳೆದ ವರ್ಷ ಜೂನ್ 7ರಂದು ನಟ ಚಿರಂಜೀವಿ ಸರ್ಜಾ ಇಹಲೋಕ ತ್ಯಜಿಸಿದ್ದರು. ಚಿರು ಸಾವಿನ ವಿಚಾರ ಒಂದು ಘಳಿಗೆ ಚಂದನವನಕ್ಕೆ ಮಂಕು ಬಳಿದಂತಾಗಿತ್ತು. ಆದರೆ ಇಂದು ಚಿರು ಸತ್ತು ಒಂದು ವರ್ಷ ತುಂಬಿದ್ದು, ಕುಟುಂಬದವರು, ಸ್ನೇಹಿತರು ಹಾಗೂ ಅಭಿಮಾನಿಗಳು ಹೀಗೆ ಗಣ್ಯಾತಿ ಗಣ್ಯರು ಚಿರು ಜೊತೆಗೆ ಕಳೆದ ಕೆಲವು ಕಾಲಗಳ ಫೋಟೋವನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಳ್ಳುತ್ತಿದ್ದಾರೆ. ಇದನ್ನು ಓದಿ: ದರ್ಶನ್‍ಗೆ ಕೃತಜ್ಞತೆ ಸಲ್ಲಿಸಿದ ಅರವಿಂದ ಲಿಂಬಾವಳಿ

ಸದ್ಯ ಚಾಲೆಂಜಿಂಗ್ ಸ್ಟಾರ್ ದರ್ಶನ್‍ರವರು ಚಿರು ಜೊತೆಗಿರುವ ಫೋಟೋವನ್ನು ತಮ್ಮ ಇನ್‍ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದು, ನೀನು ಸದಾ ನೆನಪಿನಲ್ಲಿಯೇ ಇರುತ್ತೀಯಾ ನನ್ನ ಗೆಳೆಯ ಚಿರು ಎಂದು ಕ್ಯಾಪ್ಷನ್ ಹಾಕಿಕೊಂಡಿದ್ದಾರೆ. ಅಲ್ಲದೆ ಫೋಟೋದಲ್ಲಿ ಚಿರು ಬ್ಲೂ ಕಲರ್ ಟಿ ಶರ್ಟ್ ಧರಿಸಿದ್ದು, ನಾಯಿ ಮರಿಯೊಂದನ್ನು ದರ್ಶನ್ ಜೊತೆ ಕೈಯಲ್ಲಿ ಹಿಡಿದುಕೊಂಡಿರುವುದನ್ನು ಕಾಣಬಹುದಾಗಿದೆ.

ಆ್ಯಕ್ಷನ್ ಕಿಂಗ್ ಅರ್ಜುನ್ ಸರ್ಜಾರವರ ಪುತ್ರಿ ಐಶ್ವರ್ಯ ಅರ್ಜುನ್ ಕೂಡ ಚಿರುರವರ ವೀಡಿಯೋವೊಂದನ್ನು ಹಂಚಿಕೊಂಡಿದ್ದು, ನೀನು ಸದಾ ನಮ್ಮ ಹೃದಯದಲ್ಲಿ ಇರುತ್ತೀಯಾ ಎಂದು ಕ್ಯಾಪ್ಷನ್‍ನಲ್ಲಿ ಬರೆದುಕೊಂಡಿದ್ದಾರೆ. ಇದನ್ನು ಓದಿ: ಇಂದು ಚಿರಂಜೀವಿ ಸರ್ಜಾ ಪುಣ್ಯಸ್ಮರಣೆ- ಕುಟುಂಬಸ್ಥರಿಂದ ಪೂಜೆ

 

View this post on Instagram

 

A post shared by Aishwarya Arjun (@aishwaryaarjun)

Comments

Leave a Reply

Your email address will not be published. Required fields are marked *