ಸಮಾಜವಾದಿ ಪಕ್ಷದ ಸಂಸ್ಥಾಪಕ, ಮಾಜಿ ಸಚಿವ ಭಗವತಿ ಸಿಂಗ್ ಇನ್ನಿಲ್ಲ

ಲಕ್ನೋ: ಸಮಾಜವಾದಿ ಪಕ್ಷದ ಸಂಸ್ಥಾಪಕ ಹಾಗೂ ಉತ್ತರ ಪ್ರದೇಶದ ಮಾಜಿ ಸಚಿವ ಭಗವತಿ ಸಿಂಗ್ ಭಾನುವಾರ ನಿಧನರಾಗಿದ್ದಾರೆ.

ಭಗವತಿ ಸಿಂಗ್(83) ಲಕ್ನೋದ ಬಕ್ಷಿಕಾ ತಲಾಭ್ ಪ್ರದೇಶದ ಪದವಿ ಕಾಲೇಜಿನಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ಸಾಯುವುದಕ್ಕೂ ಮುನ್ನ ಭಗವತಿ ಸಿಂಗ್ ತಮ್ಮ ಶರೀರವನ್ನು ಕಿಂಗ್ ಜಾರ್ಜ್ ವೈದ್ಯಕೀಯ ವಿಶ್ವವಿದ್ಯಾಲಯಕ್ಕೆ ದಾನ ಮಾಡುವುದಾಗಿ ಮಾತು ನೀಡಿದ್ದರು. ಹೀಗಾಗಿ ಅವರ ಅಂತಿಮ ವಿಧಿ ವಿಧಾನವನ್ನು ಮಾಡುತ್ತಿಲ್ಲ ಎಂದು ವರದಿಯಾಗಿದೆ.

ಭಗವತಿ ಸಿಂಗ್ ಸಾವಿಗೆ ಮಾಜಿ ಸಿಎಂ ಅಖಿಲೇಶ್ ಯಾದವ್, ‘ದೇವರು ನಿಮ್ಮ ಆತ್ಮಕ್ಕೆ ಶಾಂತಿ ನೀಡಲಿ, ನಿಮ್ಮ ಕುಟುಂಬಕ್ಕೆ ನಷ್ಟವನ್ನು ಭರಿಸುವ ಶಕ್ತಿ ನೀಡಲಿ’ ಎಂದು ಸಂತಾಪ ಸೂಚಿಸಿದ್ದಾರೆ.

ಸಮಾಜವಾದಿ ಪಕ್ಷದ ಸಂಸ್ಥಾಪಕರಾಗಿದ್ದ ಭಗವತಿ ಸಿಂಗ್, ಮುಲಾಯಂ ಸಿಂಗ್ ಯಾದವ್ ಅವರ ಆಪ್ತರಾಗಿದ್ದರು.

Comments

Leave a Reply

Your email address will not be published. Required fields are marked *