ಸರ್ಕಾರದ ಆಂತರಿಕ ಹುಳುಕುಗಳು ಈಗ ಹೊರಗೆ ಬರುತ್ತಿದೆ: ಡಿಕೆಶಿ

ಹುಬ್ಬಳ್ಳಿ: ಸರ್ಕಾರದ ಆಂತರಿಕ ಹುಳುಕುಗಳು ಈಗ ಹೊರಗೆ ಬರುತ್ತಿವೆ. ಸರ್ಕಾರ ಇರುತ್ತೋ, ಇಲ್ಲವೋ ಅಂತಾ ಅವರ ಸಚಿವರೆ ಬಹಿರಂಗವಾಗಿ ಹೇಳುತ್ತಿದ್ದಾರೆ. ಮುಂದೆ ಕಾದು ನೋಡಿ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವ್ಯಂಗ್ಯವಾಡಿದ್ದಾರೆ.

ನಗರದಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರ ಸದಸ್ಯತ್ವ ಅಭಿಯಾನ ಸಮಾರಂಭ ಉದ್ಘಾಟಿಸಿದ ಬಳಿಕ ಮಾತನಾಡಿದ ಡಿಕೆಶಿ, ಸಚಿವ ಆನಂದ್ ಸಿಂಗ್ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದರು. ಸರ್ಕಾರದ ಒಂದೊಂದೇ ಹುಳುಕುಗಳು ಈಗ ಹೊರಬರುತ್ತಿವೆ. ಹುಳುಕು ಹೊರ ಬರುತ್ತಿದ್ದಂತೆಯೇ ಏನಾಗುತ್ತದೆಯೋ ಕಾದು ನೋಡಬೇಕು ಎಂದರು.

ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ ವಿಚಾರವಾಗಿ ಮಾತನಾಡಿದ ಅವರು, ರಾಮಲಿಂಗಾ ರೆಡ್ಡಿ ನೇತೃತ್ವದಲ್ಲಿ ಕಮಿಟಿ ಮಾಡಿದ್ದೇವೆ. ಅವರ ವರದಿ ಮೇಲೆ ನಾಳೆ ಫೈನಲ್ ಮಾಡುತ್ತೇವೆ. ಈಗಾಗಲೇ ಬಹಳಷ್ಟು ಜನ ಆರ್ಜಿ ಸಲ್ಲಿಸಿದ್ದಾರೆ. ಈ ಬಗ್ಗೆ ಸಭೆ ಮಾಡಿ ನಿರ್ಧಾರ ತೆಗೆದುಕೊಳ್ಳುತ್ತೇವೆ ಹೇಳಿದರು.

ಡ್ರಗ್ಸ್ ಪ್ರಕರಣದಲ್ಲಿ ಸರ್ಕಾರಕ್ಕೆ ಒತ್ತಡ ಇದೆ ಅಂತ ಈಗಾಗಲೇ ಗೊತ್ತಾಗಿದೆ. ಆದ್ದರಿಂದಲೇ ಅಧಿಕಾರಿಗಳ ಎತ್ತಂಗಡಿ ಮಾಡಿದ್ದಾರೆ. ಆದರೆ ಅಧಿಕಾರಿಗಳ ವರ್ಗಾವಣೆ ಬಗ್ಗೆ ನಾನೇನು ಮಾತನಾಡುವುದಿಲ್ಲ ಎಂದರು.

Comments

Leave a Reply

Your email address will not be published. Required fields are marked *