ಸರ್ಕಾರಿ ಶಾಲೆಯಲ್ಲಿ ಆಕಸ್ಮಿಕ ಬೆಂಕಿ- ಬಿಸಿಯೂಟದ ದವಸ ಧಾನ್ಯ ಭಸ್ಮ

ರಾಯಚೂರು: ಸರ್ಕಾರಿ ಶಾಲೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಪುಸ್ತಕ, ಬಿಸಿಯೂಟದ ದವಸ ಧಾನ್ಯಗಳು ಸುಟ್ಟು ಭಸ್ಮವಾಗಿರುವ ಘಟನೆ ದೇವದುರ್ಗದ ಜಾಲಹಳ್ಳಿಯ ಶಾಲೆಯಲ್ಲಿ ನಡೆದಿದೆ.

ಜಾಲಹಳ್ಳಿಯ ಸರ್ಕಾರಿ ಕನ್ಯಾ ಪ್ರೌಢ ಶಾಲೆಯಲ್ಲಿ ಆಕಸ್ಮಿಕ ಬೆಂಕಿ ಅವಘಡದಿಂದಾಗಿ ಬಿಸಿಯೂಟದ ದವಸ ಧಾನ್ಯ, ಬೈಸಿಕಲ್, ಪುಸ್ತಕಗಳು ಸೇರಿ ವಿವಿಧ ವಸ್ತುಗಳು ಬೆಂಕಿಗಾಹುತಿಯಾಗಿವೆ. 35 ಚೀಲ ಅಕ್ಕಿ, 10 ಬೈಸಿಕಲ್ ಹಾಗೂ ಕೋಣೆಯಲ್ಲಿದ್ದ ನೋಟ್ ಪುಸ್ತಕ ಸುಟ್ಟುಹೋಗಿವೆ.

ಅಗ್ನಿಶಾಮಕದಳ ಕೂಡಲೇ ಸ್ಥಳಕ್ಕಾಗಮಿಸಿ ಬೆಂಕಿನಂದಿಸಿದ್ದಾರೆ. ಬೆಳಗಿನ ಜಾವ ದುಷ್ಕರ್ಮಿಗಳು ಬೆಂಕಿ ಹಚ್ಚಿರುವ ಶಂಕೆ ವ್ಯಕ್ತವಾಗಿದೆ. ಸ್ಥಳೀಯರು ಶಾಲೆಯಿಂದ ಹೊಗೆ ಬರುತ್ತಿರುವುದನ್ನ ಗಮನಿಸಿ ಮುಖ್ಯೋಪಾಧ್ಯಾಯರು ಹಾಗೂ ಅಗ್ನಿಶಾಮಕದಳಕ್ಕೆ ಮಾಹಿತಿ ನೀಡಿದ್ದಾರೆ. ಈ ಅವಘಡ ಕುರಿತಾಗಿ ಮುಖ್ಯೋಪಾಧ್ಯಾಯ ಶಾಕೀಲ್ ಸಾಬ್ ಜಾಲಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Comments

Leave a Reply

Your email address will not be published. Required fields are marked *