ಸಿಇಟಿ ಫಲಿತಾಂಶ ಒಂದು ದಿನ ಮುಂದಕ್ಕೆ: ಅಶ್ವಥ್ ನಾರಾಯಣ್

ಬೆಂಗಳೂರು: ಸಿಇಟಿ ಫಲಿತಾಂಶವನ್ನು ಒಂದು ದಿನ ಮುಂದಕ್ಕೆ ಹಾಕಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವಥ್ ನಾರಾಯಣ್ ತಿಳಿಸಿದ್ದಾರೆ.

ಕಳೆದ ಜುಲೈ 30 ಮತ್ತು 31ರಂದು ನಡೆದಿದ್ದ ಸಿಇಟಿ ಪರೀಕ್ಷೆಯ ಫಲಿತಾಂಶ ಗುರುವಾರ ಪ್ರಕಟವಾಗಬೇಕಿತ್ತು. ಆದರೆ ತಾಂತ್ರಿಕ ಕಾರಣಗಳಿಂದಾಗಿ ಗುರುವಾರ ಪ್ರಕಟವಾಗಬೇಕಾಗಿದ್ದ ಸಿಇಟಿ ಪರೀಕ್ಷೆಯ ಫಲಿತಾಂಶವನ್ನು ಶುಕ್ರವಾರ (ಆಗಸ್ಟ್ 21) ಪ್ರಕಟಿಸಲಾಗುವುದು ಎಂದು ಡಿಸಿಎಂ ಹೇಳಿದ್ದಾರೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ), ಶುಕ್ರವಾರ ಮಧ್ಯಾಹ್ನ 12.30ಕ್ಕೆ ಫಲಿತಾಂಶವನ್ನು ಸಾರ್ವಜನಿಕರಿಗೆ ಲಭ್ಯವಾಗುವ ಹಾಗೆ ಮಾಡಲಿದೆ ಎಂದು ಅವರು ತಿಳಿಸಿದ್ದಾರೆ. ಆಗಸ್ಟ್ 21 ಬೆಳಗ್ಗೆ 11 ಗಂಟೆಗೆ ಪತ್ರಿಕಾಗೋಷ್ಠಿ ಇರುತ್ತದೆ ಎಂದು ಅವರು ಮಾಹಿತಿ ನೀಡಿದ್ದಾರೆ.

http://karresults.nic.in ಲಿಂಕ್‍ನಲ್ಲಿ ಫಲಿತಾಂಶ ಲಭ್ಯವಾಗಲಿದೆ ಎಂದು ಅಶ್ವಥ್ ನಾರಾಯಣ್ ತಿಳಿಸಿದ್ದಾರೆ.

Comments

Leave a Reply

Your email address will not be published. Required fields are marked *