ಸಿಡಿ ಕೇಸ್ – ಮಗಳನ್ನು ಹುಡುಕಿ ಕೊಡಿ ಎಂದು ತಂದೆ ಸಲ್ಲಿಸಿದ್ದ ಅರ್ಜಿ ಇತ್ಯರ್ಥ

ಧಾರವಾಡ: ಮಾಜಿ ಸಚಿವರ ವಿರುದ್ಧ ಸಿಡಿ ಕೇಸ್ ವಿಚಾರವಾಗಿ ಯುವತಿ ತಂದೆ ದಾಖಲಿಸಿದ್ದ ಹೆಬಿಯಸ್ ಕಾರ್ಪಸ್ ಅರ್ಜಿ ಇತ್ಯರ್ಥಗೊಳಿಸಿ ಧಾರವಾಡ ಹೈಕೋರ್ಟ್ ವಿಭಾಗೀಯ ಪೀಠ ಆದೇಶಿಸಿದೆ.

ಮೇ 27 ರಂದು ಸಿಡಿಯಲ್ಲಿದ್ದ ಯುವತಿ ತಂದೆ ಧಾರವಾಡ ಹೈಕೋರ್ಟ್ ನಲ್ಲಿ ನನ್ನ ಮಗಳನ್ನ ಹುಡುಕಿಕೊಡಿ ಎಂದು ಹೆಬಿಯಸ್ ಕಾರ್ಪಸ್ ಅರ್ಜಿಯನ್ನ ಸಲ್ಲಿಸಿದ್ದರು. ಇಂದು ನಡೆದ ವೀಡಿಯೋ ವಿಚಾರಣೆ ವೇಳೆ, ನಾನು ಸುರಕ್ಷಿತವಾಗಿದ್ದೇನೆಂದು ಯುವತಿ ಹೇಳಿಕೆ ನೀಡಿದ್ದಾಳೆ.

“ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ನಾನು ಬೆಂಗಳೂರು ವಿಳಾಸದಲ್ಲಿ ಪ್ರಸ್ತುತ ವಾಸವಾಗಿರುತ್ತೇನೆ. ನಾನು ಸ್ವಂತ ಇಚ್ಛೆ ಇಂದ ವಾಸವಾಗಿದ್ದು, ನನಗೆ ಇಲ್ಲಿ ಇರುವುದಕ್ಕೆ ಯಾರದೇ ಒತ್ತಡ ಇರುವುದಿಲ್ಲ ಮತ್ತು ನನ್ನ ರಕ್ಷಣೆಗಾಗಿ ಬೆಂಗಳೂರು ನಗರದ ಪೋಲೀಸರು ಭದ್ರತೆಯನ್ನು ಒದಗಿಸುತ್ತಾರೆ ಹಾಗೂ ನಾನು ಸುರಕ್ಷಿತವಾಗಿ ಇರುತ್ತೇನೆ. ನಾನು ಪ್ರಾಪ್ತ ವಯಸ್ಕಳಿದ್ದು ನಾನು ಸದ್ಯ ನಮ್ಮ ತಂದೆ ತಾಯಿ ಬಳಿ ಹೋಗಲು ಇಚ್ಛಿಸುವುದಿಲ್ಲ. ಈ ಪ್ರಕರಣಗಳು ಮುಗಿದ ನಂತರ ನಾನು ಅವರನ್ನು ಭೇಟಿ ಆಗುತ್ತೇನೆ.”

ಎಂದು ಯುವತಿ ಹೈಕೋರ್ಟ್ ನ್ಯಾಯಮೂರ್ತಿಗಳ ಎದುರು ವಿಡಿಯೋ ಸಂವಾದದಲ್ಲಿ ಹೇಳಿದ್ದಾಳೆ. ಯುವತಿಯ ಹೇಳಿಕೆ ಆಧಾರದ ಮೇಲೆ ತಂದೆ ಹಾಕಿದ ಅರ್ಜಿಯನ್ನ ಇತ್ಯರ್ಥ ಮಾಡಿ ಹೈಕೋರ್ಟ್ ಆದೇಶ ಮಾಡಿದೆ.

Comments

Leave a Reply

Your email address will not be published. Required fields are marked *