ಸಿದ್ದರಾಮಯ್ಯ ಎಲ್ಲೂ ಹೋಗಿಲ್ಲ, ಮನೆಯಲ್ಲಿ ಕುಳಿತಿದ್ದಾರೆ: ಬೈರತಿ ಬಸವರಾಜು

ಹಾವೇರಿ: ಮತ್ತೆ ಲಾಕ್‍ಡೌನ್ ಮಾಡುವ ಪ್ರಶ್ನೆಯೇ ಇಲ್ಲ. ಎಲ್ಲೆಲ್ಲಿ ಕೊರೊನಾ ಪ್ರಕರಣಗಳು ಜಾಸ್ತಿ ಆಗಿವೆ ಅಲ್ಲಿ ಮಾತ್ರ ಸೀಲ್‍ಡೌನ್ ಮಾಡುತ್ತೇವೆ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜು ಹೇಳಿದ್ದಾರೆ.

ಹಾವೇರಿಯ ನಗರಸಭೆ ಸಭಾಂಗಣದಲ್ಲಿ ಅಧಿಕಾರಿಗಳ ಪ್ರಗತಿ ಪರಿಶೀಲನೆ ಸಭೆಯಲ್ಲಿ ಭಾಗಿಯಾಗಿ ನಂತರ ಮಾತನಾಡಿದ ಸಚಿವರು, ಕೋವಿಡ್-19 ವಿಚಾರದಲ್ಲಿ ಅವ್ಯವಹಾರ ಆಗಿದೆ ಎಂಬುವುದು ಮಾಜಿ ಸಿಎಂ ಸಿದ್ದರಾಮಯ್ಯನವರ ಆರೋಪ ಆಧಾರ ರಹಿತವಾಗಿವೆ. ಎಲ್ಲೆಲ್ಲಿ ಏನಾಗಿದೆ ಎಂಬುದರ ದಾಖಲೆ ಇದ್ದರೆ ಕೊಡಲಿ. ಆ ಬಳಿಕ ಟೀಕೆ ಮಾಡಲಿ ಎಂದರು.

ಸಿದ್ದರಾಮಯ್ಯ ದಾಖಲೆ ನೀಡಿದರೆ ಅದರ ಬಗ್ಗೆ ಸರ್ಕಾರ ಕ್ರಮ ಕೈಗೊಳ್ಳುತ್ತದೆ. ಅಲ್ಲದೆ ಕೋವಿಡ್-19 ನಿಯಂತ್ರಣಕ್ಕೆ ತರುವ ವಿಚಾರದಲ್ಲಿ ನಮ್ಮ ಸರ್ಕಾರ ಹಿಂದೆ ಬಿದ್ದಿಲ್ಲ. ಇಡೀ ದೇಶದಲ್ಲಿ ಕರ್ನಾಟಕ ಸರ್ಕಾರಕ್ಕೆ ಕೊರೊನಾ ವಿಚಾರದಲ್ಲಿ ಮೆಚ್ಚುಗೆ ಸಿಕ್ಕಿದೆ. ಕೊರೊನಾ ಸಮಯದಲ್ಲಿ ವಿರೋಧ ಪಕ್ಷದವರು ಕೆಲಸ ಮಾಡಬೇಕಿತ್ತು. ಆದರೆ ಸಿದ್ದರಾಮಯ್ಯ ಎಲ್ಲೂ ಹೋಗಿಲ್ಲ, ಮನೆಯಲ್ಲಿ ಕುಳಿತಿದ್ದಾರೆ. ಹೀಗಾಗಿ ಕೇವಲ ಆರೋಪ ಮಾಡುತ್ತಿದ್ದಾರೆ ಎಂದು ಸಿದ್ದು ವಿರುದ್ಧ ಬೈರತಿ ವಾಗ್ದಾಳಿ ಮಾಡಿದರು.

Comments

Leave a Reply

Your email address will not be published. Required fields are marked *