ಸಿದ್ದರಾಮಯ್ಯ, ಐವಾನ್ ಡಿಸೋಜಾ ಜೊತೆ ಪ್ರಾಥಮಿಕ ಸಂಪರ್ಕದಲ್ಲಿದ್ರೂ ಕ್ವಾರಂಟೈನ್ ಆಗದ ಡಿಕೆಶಿ

– ಸಾಮಾಜಿಕ ಅಂತರ ಪಾಲಿಸದೆ ಬೇಕಾಬಿಟ್ಟಿ ತಿರುಗಾಟ
– ಕಲಬುರಗಿ ಪ್ರವಾಸದಲ್ಲಿ ಸಾಮಾಜಿಕ ಅಂತರ ಮರೆತ ಕಾಂಗ್ರೆಸ್ ಕಾರ್ಯಕರ್ತರು

ಕಲಬುರಗಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕ್ವಾರಂಟೈನ್ ನಿಯಮ ಪಾಲಿಸದರೆ ಬೇಕಾಬಿಟ್ಟಿಯಾಗಿ ತಿರುಗಾಡಿದ್ದು, ಕಲಬುರಗಿ ಪ್ರವಾಸದ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಸಾಮಾಜಿಕ ಅಂತರ ಮರೆತು ಡಿಕೆಶಿಗಾಗಿ ಮುಗಿಬಿದ್ದಿದ್ದಾರೆ.

ಜಿಲ್ಲೆಯ ಅಫಜಲಪುರ ತಾಲೂಕಿನ ದೇವಲ ಗಾಣಗಾಪುರದ ದತ್ತಾತ್ರೇಯ ದೇವಸ್ಥಾನದ ಬಳಿ ಕಾಂಗ್ರೆಸ್ ಕಾರ್ಯಕರ್ತರು ಸಾಮಾಜಿಕ ಅಂತರ ಮರೆತು ಡಿ.ಕೆ.ಶಿವಕುಮಾರ್ ಅವರನ್ನು ಸ್ವಾಗತಿಸಿದ್ದಾರೆ. ಕೊರೊನಾ ತಾಂಡವಾಡುತ್ತಿರುವುದನ್ನೂ ಲೆಕ್ಕಿಸದೆ ಒಬ್ಬರ ಮೇಲೊಬ್ಬರು ಬಿದ್ದು, ಶಾಲು, ಹೂವಿನ ಹಾರ ಹಾಕಲು ಮುಗಿಬಿದ್ದಿದ್ದಾರೆ. ನೂಕುನುಗ್ಗಲಿನಲ್ಲೇ ಡಿಕೆಶಿಗೆ ಸನ್ಮಾನ ಮಾಡಿದ್ದಾರೆ. ಆದರೆ ಡಿಕೆಶಿ ಕೊರೊನಾ ಸೋಂಕಿತರಾದ ಸಿದ್ದರಾಮಯ್ಯ ಹಾಗೂ ಐವಾನ್ ಡಿಸೋಜಾ ಅವರೊಂದಿಗೆ ಪ್ರಾಥಮಿಕ ಸಂಪರ್ಕ ಹೊಂದಿದ್ದಾರೆ.

ಡಿ.ಕೆ.ಶಿವಕುಮಾರ್ ಕೊರೊನಾ ಸೋಂಕಿತ ಮಾಜಿ ಎಂಎಲ್‍ಸಿ ಐವಾನ್ ಡಿಸೋಜಾ ಅವರ ಪ್ರಾಥಮಿಕ ಸಂಪರ್ಕದಲ್ಲಿದ್ದರು. ಈ ಹಿಂದೆ ಮಂಗಳೂರಿನಲ್ಲಿ ಇಬ್ಬರೂ ಒಟ್ಟಿಗೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ನಂತರ ಐವಾನ್ ಡಿಸೋಜಾ ಕೊರೊನಾ ಪರೀಕ್ಷೆ ನಡೆಸಿದಾಗ ಪಾಸಿಟಿವ್ ಬಂದಿತ್ತು. ಇಷ್ಟಾದರೂ ಕ್ವಾರಂಟೈನ್‍ಗೆ ಒಳಗಾಗದೆ ಡಿ.ಕೆ.ಶಿವಕುಮಾರ್ ಬೇಕಾಬಿಟ್ಟಿಯಾಗಿ ಓಡಾಡುತ್ತಿದ್ದು, ಜಿಲ್ಲೆಗಳ ಪ್ರವಾಸದಲ್ಲಿ ಫುಲ್ ಬ್ಯುಸಿಯಾಗಿದ್ದಾರೆ.

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರಿಗೂ ಕೊರೊನಾ ಸೋಂಕು ತಗುಲಿದ್ದು, ಇವರೊಂದಿಗೂ ಡಿಕೆಶಿ ಪ್ರಾಥಮಿಕ ಸಂಪರ್ಕ ಹೊಂದಿದ್ದರು. ಇಬ್ಬರು ಕೊರೊನಾ ಸೋಂಕಿತರ ಜೊತೆ ಪ್ರಾಥಮಿಕ ಸಂಪರ್ಕ ಹೊಂದಿದ್ದರೂ, ಡೋಂಟ್ ಕೇರ್ ಎಂದು ಡಿಕೆಶಿ ಜಿಲ್ಲೆಗಳ ಪ್ರವಾಸ ಮಾಡುತ್ತಿದ್ದಾರೆ. ಜನ ಗುಂಪಾಗಿ ಸೇರಿದರೆ ಕೊರೊನಾ ವ್ಯಾಪಿಸಲಿದೆ ಎಂಬುದನ್ನೂ ಲೆಕ್ಕಿಸದೆ ಬೇಕಾಬಿಟ್ಟಿಯಾಗಿ ಓಡಾಡುತ್ತಿದ್ದಾರೆ. ಕಾರ್ಯಕರ್ತರು ಸಹ ಯಾವುದೇ ಭಯವಿಲ್ಲದೆ ಭಾಗವಹಿಸುತ್ತಿದ್ದಾರೆ.

ಕೊರೊನಾ ಲೆಕ್ಕಿಸದ ಕಲಬುರಗಿ ಕಾಂಗ್ರೆಸ್ ಕಾರ್ಯಕರ್ತರು ಮುಗಿಬಿದ್ದು ಡಿಕೆಶಿಯವರಿಗೆ ಸನ್ಮಾನ ಮಾಡಿದ್ದಾರೆ. ಇದಕ್ಕೂ ಮೊದಲು ಬೆಂಗಳೂರಿನಿಂದ ಕಲಬುರಗಿ ವಿಮಾನ ನಿಲ್ದಾಣಕ್ಕೆ ಡಿ.ಕೆ.ಶಿವಕುಮಾರ್ ಬಂದಿಳಿಯುತ್ತಿದ್ದಂತೆ ಮಂಗಳಮುಖಿಯರು ರಾಖಿ ಕಟ್ಟಿ ಸಂಭ್ರಮಿಸಿದ್ದಾರೆ. ಈ ವೇಳೆ ಮಂಗಳಮುಖಿಯರು ಸಹ ನೂಕುನುಗ್ಗಲು ಮಾಡಿಕೊಂಡಿದ್ದಾರೆ. ಸಾಮಾಜಿಕ ಅಂತರ ಪಾಲಿಸಿಲ್ಲ.

Comments

Leave a Reply

Your email address will not be published. Required fields are marked *