ಸಿಲಿಂಡರ್ ಸ್ಫೋಟ 13 ಜನ ವಲಸೆ ಕಾರ್ಮಿಕರಿಗೆ ಗಾಯ

ಹೈದರಾಬಾದ್: ಮನೆಯಲ್ಲಿದ್ದ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ 13 ಜನ ವಲಸೆ ಕಾರ್ಮಿಕರು ಗಾಯಗೊಂಡಿರುವ ಘಟನೆ ಪಾಥಾ ಬಸ್ತಿ ಬಳಿ ಸಂಭವಿಸಿದೆ.

ಹೈದರಾಬಾದ್ ಸಮೀಪದ ಪಾಥಾ ಬಸ್ತಿ ಬಳಿ ಬಂಗಾಳದಿಂದ ವಲಸೆ ಬಂದ ಕಾರ್ಮಿಕರು ಚಿನ್ನ ತಯಾರಿ ಕೆಲಸದಲ್ಲಿ ತೊಡಗಿದ್ದರು. ರಾತ್ರಿ ಏಕಾಏಕಿ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ 13 ಜನ ಗಾಯಗೊಂಡಿದ್ದು ಒಬ್ಬನ ಸ್ಥಿತಿ ಗಂಭೀರವಾಗಿದೆ.

ಸ್ಥಳೀಯರ ಪ್ರಕಾರ ಮಧ್ಯರಾತ್ರಿ ಕೇಳಿಬಂದ ಶಬ್ಧಕ್ಕೆ ಎಚ್ಚರಗೊಂಡು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ನಂತರ ಪೊಲೀಸರಿಗೆ ಮತ್ತು ಅಗ್ನಿಶಾಮಕದಳಕ್ಕೆ ಕೂಡಲೇ ಮಾಹಿತಿ ನೀಡಿ ಗಾಯಾಳುಗಳನ್ನು ಹತ್ತಿರದ ಉಸ್ಮಾನಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪಶ್ಚಿಮ ಬಂಗಾಳದಿಂದ ವಲಸೆ ಬಂದಿದ್ದ 13 ಮಂದಿ ಕಾರ್ಮಿಕರು ಒಂದೇ ಮನೆಯಲ್ಲಿ ವಾಸಿಸುತ್ತಿದ್ದರು. ಚಿನ್ನ ತಯಾರಿಕೆ ಕೆಲಸಕ್ಕಾಗಿ ಬಳಸಿದ್ದ ರಾಸಾಯನಿಕಗಳಿಂದ ಸ್ಫೋಟ ಸಂಭವಿಸಿದೆ ಎಂದು ಶಂಕಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದು, ಪ್ರಕರಣ ದಾಖಲಿಸಿಕೊಂಡು ಹಚ್ಚಿನ ತನಿಖೆ ನಡೆಸುತ್ತಿದ್ದಾರೆ.

Comments

Leave a Reply

Your email address will not be published. Required fields are marked *