ಸೌರವ್‌ ಗಂಗೂಲಿಗೆ ಎದೆನೋವು- ಮತ್ತೆ ಆಸ್ಪತ್ರೆಗೆ ದಾಖಲು

ಕೋಲ್ಕತ್ತಾ: ಟೀಂ ಇಂಡಿಯಾದ ಮಾಜಿ ನಾಯಕ, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ (ಬಿಸಿಸಿಐ) ಅಧ್ಯಕ್ಷ ಸೌರವ್‌ ಗಂಗೂಲಿ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಇಂದು ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಗಂಗೂಲಿ ಅವರನ್ನು ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ.

ಜನವರಿ ಮೊದಲ ವಾರದಲ್ಲಿ ಜಿಮ್‌ನಲ್ಲಿ ಅಭ್ಯಾಸ ಮಾಡುತ್ತಿದ್ದಾಗ ಗಂಗೂಲಿಗೆ ಹೃದಯ ನೋವು ಕಾಣಿಸಿಕೊಂಡು ಲಘು ಹೃದಯಾಘಾತವಾಗಿತ್ತು. ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಖ್ಯಾತ ಹೃದಯ ಸರ್ಜನ್​ ಡಾ. ದೇವಿ ಶೆಟ್ಟಿ ಅವರು ಆಸ್ಪತ್ರೆಯಲ್ಲಿದ್ದ ಗಂಗೂಲಿ ಅವರರನ್ನು ಭೇಟಿ ಮಾಡಿ ಸಲಹೆಗಳನ್ನು ನೀಡಿದ್ದರು. ಬಳಿಕ ಗಂಗೂಲಿ ಡಿಸ್ಚಾರ್ಜ್‌ ಆಗಿದ್ದರು.

Comments

Leave a Reply

Your email address will not be published. Required fields are marked *