ಸ್ಟುಡಿಯೋಗೆ ನುಗ್ಗಿ ಫೋಟೋಗ್ರಾಫರ್ ಮೇಲೆ ತಲ್ವಾರ್ ದಾಳಿ

ಮಂಗಳೂರು: ಏಕಾಏಕಿ ಸ್ಟುಡಿಯೋಗೆ ನುಗ್ಗಿ ಫೋಟೋಗ್ರಾಫರ್ ಮೇಲೆ ತಲ್ವಾರ್ ದಾಳಿ ಮಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಫರಂಗಿಪೇಟೆಯಲ್ಲಿ ನಡೆದಿದೆ.

ದಿನೇಶ್ ಕೊಟ್ಟಿಂಜ ದಾಳಿಗೊಳಗಾದ ಫೋಟೋಗ್ರಾಫರ್. ಇವರು ಫರಂಗಿಪೇಟೆಯಲ್ಲಿ ಸ್ಟುಡಿಯೋ ಇಟ್ಟುಕೊಂಡಿದ್ದಾರೆ. ಅಪರಿಚಿತ ವ್ಯಕ್ತಿಗಳು ಅಂಗಡಿಗೆ ನುಗ್ಗಿ ದಾಳಿ ಮಾಡಿದ್ದಾರೆ.

ಘಟನೆಯಿಂದ ಗಂಭೀರ ಗಾಯಗೊಂಡ ದಿನೇಶ್ ಅವರನ್ನು ಕೂಡಲೇ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಬಂಟ್ವಾಳ ಡಿ.ವೈ.ಎಸ್.ಪಿ ವೆಲೆಂಟೈನ್ ಡಿ.ಸೋಜ ವೃತ್ತ ನಿರೀಕ್ಷಕ ಟಿ.ಡಿ.ನಾಗರಾಜ್ ಹಾಗೂ ಎಸ್.ಐ ಪ್ರಸನ್ನ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಸುರೇಂದ್ರನನ್ನ ನಾನೇ ಕೊಂದಿದ್ದು – ಪೊಲೀಸರಿಗೆ ಆಡಿಯೋ ಕಳುಹಿಸಿದ ಆರೋಪಿ

Comments

Leave a Reply

Your email address will not be published. Required fields are marked *