ಹಳ್ಳದಲ್ಲಿ ಮೀನು ಹಿಡಿಯಲು ಹೋದ ಇಬ್ಬರು ಬಾಲಕರು ನಾಪತ್ತೆ

ಚಿತ್ರದುರ್ಗ: ಮೀನು ಹಿಡಿಯಲು ಹೋದ ಇಬ್ಬರು ಬಾಲಕರು ನಾಪತ್ತೆಯಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ನರಸೀಪುರ ಗ್ರಾಮದ ಹಿರೇಹಳ್ಳದಲ್ಲಿ ನಡೆದಿದೆ.

ಗುರುವಾರ ಮಧ್ಯಾಹ್ನ ಮೀನು ಹಿಡಿಯಲು ತೆರಳಿದ್ದ, ದೇವಪುರ ಗ್ರಾಮದ ಜಯಂತ್ (13) ಹಾಗು ಗೌನಹಳ್ಳಿಯ ಪ್ರಜ್ವಲ್ (12) ಸಂಜೆಯ ಬಳಿಕ ನಾಪತ್ತೆಯಾಗಿದ್ದಾರೆ. ಹೀಗಾಗಿ ನಾಪತ್ತೆಯಾದ ಬಾಲಕರಿಗಾಗಿ ತಡರಾತ್ರಿಯವರೆಗೆ ಶೋಧ ಕಾರ್ಯ ಚುರುಕಾಗಿ ನಡೆದಿದ್ದು ಘಟನಾ ಸ್ಥಳಕ್ಕೆ ಹೊಸದುರ್ಗ ಶಾಸಕ ಗೂಳಿಹಟ್ಟಿ ಶೇಖರ್ ಭೇಟಿ ನೀಡಿದ್ದರು.

ಶಾಸಕರು ಕೂಡ ಶೋಧ ಕಾರ್ಯದಲ್ಲಿ ಭಾಗಿಯಾಗಿದ್ದರು. ಆದರೆ ಕತ್ತಲಾದ ಕಾರಣ ಕಾರ್ಯಚರಣೆಯನ್ನು ನಿಲ್ಲಿಸಲಾಗಿತ್ತು. ಆದರೆ ಮತ್ತೆ ಇಂದು ಬೆಳಿಗ್ಗೆ 6 ಗಂಟೆಯಿಂದಲೇ ಬಾಲಕರ ಪತ್ತೆಗಾಗಿ, ಅಗ್ನಿಶಾಮಕದಳ ಸಿಬ್ಬಂದಿ, ಪೊಲೀಸರು ಹಾಗೂ ಕ್ರೀಡಾ ಇಲಾಖೆ ಅಧಿಕಾರಿಗಳೆಲ್ಲರೂ ಒಟ್ಟಾಗಿ ಹಳ್ಳದಲ್ಲಿ ಸರ್ಚ್ ಹುಡುಕುತ್ತಿದ್ದಾರೆ. ಈ ಪ್ರಕರಣ ಹೊಸದುರ್ಗ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

Comments

Leave a Reply

Your email address will not be published. Required fields are marked *