ಹಾನಗಲ್‍ನಲ್ಲಿ ಉದಾಸಿ ಅಂತ್ಯಕ್ರಿಯೆ- ಬೊಮ್ಮಾಯಿ ಅಂತಿಮ ನಮನ

ಹಾವೇರಿ: ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಮಾಜಿ ಸಚಿವ ಸಿ.ಎಂ.ಉದಾಸಿ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು, ನಮನ ಸಲ್ಲಿಸಿದರು.

ಹಾನಗಲ್ ನಲ್ಲಿ ಬುಧವಾರ ಸಂಜೆ ಸಿ.ಎಂ.ಉದಾಸಿ ಅವರ ಅಂತ್ಯಕ್ರಿಯೆ ಸಾಂಪ್ರದಾಯಿಕ ಹಾಗೂ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು. ಈ ಸಂದರ್ಭದಲ್ಲಿ ಉದಾಸಿ ಅವರನ್ನು ಸ್ಮರಿಸಿ ಬಸವರಾಜ ಬೊಮ್ಮಾಯಿ ಭಾವುಕರಾದರು. ಇದನ್ನೂ ಓದಿ: ಬುಧವಾರ ಮಾಜಿ ಸಚಿವ ಸಿ.ಎಂ.ಉದಾಸಿ ಅಂತ್ಯ ಸಂಸ್ಕಾರ – ಪತ್ನಿ ನೀಲಮ್ಮ ಕಣ್ಣೀರು

ಉದಾಸಿ ಹಿರಿಯ ಮುತ್ಸದ್ದಿ ರಾಜಕಾರಣಿ, ನಮ್ಮ ತಂದೆಯ ನಂತರ ಅವರು ನನಗೆ ರಾಜಕೀಯ ಮಾರ್ಗದರ್ಶಕರಾಗಿದ್ದರು. ರಾಜಕೀಯವಾಗಿ ಅವರೇ ನನಗೆ ಗಾಡ್ ಫಾದರ್ ಆಗಿದ್ದರು. ಒಂದು ರೀತಿ ತಂದೆಯನ್ನು ಕಳೆದುಕೊಂಡ ಭಾವ ನನಗೆ ಕಾಡುತ್ತಿದೆ. ಅವರು ಸಾಕಷ್ಟು ಆದರ್ಶಗಳನ್ನು ಬಿಟ್ಟು ಹೋಗಿದ್ದಾರೆ. ಆ ಆದರ್ಶಗಳನ್ನು ಪಾಲಿಸಿಕೊಂಡು ಹೋಗಬೇಕಾಗಿದೆ ಅಷ್ಟೇ ಎಂದು ಭಾವುಕರಾದರು.

Comments

Leave a Reply

Your email address will not be published. Required fields are marked *