ಹಾವು ಕಚ್ಚಿ ಯುವಕ ಸಾವು

ಮೈಸೂರು: ಹಾವು ಕಚ್ಚಿ 21 ವರ್ಷದ ಯುವಕ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಕಾಳಬೋಚನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಸಂತೋಷ್ ಹಾವು ಕಚ್ಚಿ ಮೃತಪಟ್ಟ ಯುವಕ. ಜಮೀನಿನಲ್ಲಿ ರಾಗಿ ಬೆಳೆ ಕಟಾವು ಮಾಡುವಾಗ ಸಂತೋಷನಿಗೆ ಹಾವು ಕಚ್ಚಿತ್ತು. ಹನಗೋಡು ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಮೈಸೂರಿನ ಕೆಆರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯದಾಗೇ ಸಂತೋಷ್ ಮೃತಪಟ್ಟಿದ್ದು, ಆಸ್ಪತ್ರೆ ಆವರಣದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಮೃತ ಸಂತೋಷ್ ಅಂತಿಮ ವರ್ಷದ ಪದವಿ ವಿದ್ಯಾರ್ಥಿಯಾಗಿದ್ದನು. ಹುಣಸೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Comments

Leave a Reply

Your email address will not be published. Required fields are marked *