ಹಾಸನದಲ್ಲಿ ತಡರಾತ್ರಿ ಮುಂದುವರಿದ ವರುಣನ ಅಬ್ಬರ- ರೈತ ಕಂಗಾಲು

ಹಾಸನ: ಜಿಲ್ಲೆಯ ವಿವಿಧೆಡೆ ರಾತ್ರಿ ವರುಣನ ಆರ್ಭಟ ಮುಂದುವರಿದಿತ್ತು. ಹಾಸನ, ಅರಕಲಗೂಡು, ಬೇಲೂರು ಸೇರಿದಂತೆ ಹಲವೆಡೆ ಗುಡುಗು ಸಹಿತ ಧಾರಾಕಾರ ಮಳೆಯಾಗಿದೆ.

ರಾತ್ರಿ ಎರಡು ಗಂಟೆಗೂ ಹೆಚ್ಚು ಕಾಲ ಹಲವೆಡೆ ಮಳೆ ಸುರಿದಿದೆ. ಅಕಾಲಿಕ ಮಳೆಯಿಂದ ಅನ್ನದಾತ ಮತ್ತೆ ಸಂಕಷ್ಟಕ್ಕೆ ಸಿಲುಕಿದ್ದಾನೆ. ರೈತರು ಭತ್ತ, ಕಾಫಿ ಕೊಯ್ಲು ಮಾಡುತ್ತಿದ್ದಾರೆ. ಆದರೆ ಮೂರು ದಿನಗಳಿಂದ ಭಾರೀ ಮಳೆ ಸುರಿಯುತ್ತಿದ್ದು, ರೈತರು ಆತಂಕಕ್ಕೀಡಾಗಿದ್ದಾರೆ.

ಆಲಿಕಲ್ಲು ಮಳೆಯಿಂದ ರೈತರು ತಾವು ಬೆಳೆದ ಬೆಳೆ ನಷ್ಟ ಅನುಭವಿಸಿದ್ದರು. ಇದೀಗ ಮತ್ತೆ ಮಳೆಯಾಗುತ್ತಿರುವುದರಿಂದ ಭತ್ತ, ಮೆಣಸು, ಕಾಫಿ ಬೆಳೆಗಾರರಿಗೆ ಸಂಕಷ್ಟ ಎದುರಾಗಿದೆ.

Comments

Leave a Reply

Your email address will not be published. Required fields are marked *