ಹಿಂದೂ ದೇವರ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ್ಕೆ ಕಮೆಂಟ್ ಮಾಡಿದ್ದೆ: ನವೀನ್

– ಬೇಕೂ ಅಂತ ಯಾವುದೇ ಪೋಸ್ಟ್ ಮಾಡಿಲ್ಲ, ಕೇವಲ ಕಮೆಂಟ್ ಮಾಡಿದ್ದೇನೆ

ಬೆಂಗಳೂರು: ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅಳಿಯ ನವೀನ್ ಫೆಸ್ಬುಕ್ ಪೋಸ್ಟ್‍ನಿಂದಲೇ ಗಲಾಟೆಯಾಯಿತು ಎಂಬ ಕುರಿತು ಚರ್ಚೆ ನಡೆಯುತ್ತಿದೆ. ನಾನು ಬೇಕೂ ಅಂತ ಯಾವುದನ್ನೂ ಪೋಸ್ಟ್ ಮಾಡಿಲ್ಲ. ಅವರು ಮಾಡಿದ್ದ ಪೋಸ್ಟ್‍ಗೆ ಕಮೆಂಟ್ ಮಾಡಿದ್ದೆ ಅಷ್ಟೆ ಎಂದು ವಿಚಾರಣೆ ವೇಳೆ ಆರೋಪಿ ನವೀನ್ ತಿಳಿಸಿದ್ದಾನೆ.

ಫೇಸ್ಬುಕ್ ನಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ ಕುರಿತು ನವೀನ್ ಪೊಲೀಸರ ವಿಚಾರಣೆ ವೇಳೆ ಮಾಹಿತಿ ನೀಡಿದ್ದು, ನಾನು ಬೇಕು ಅಂತ ಯಾವುದನ್ನೂ ಪೋಸ್ಟ್ ಮಾಡಿಲ್ಲ, ಅವರು ಮಾಡಿದ್ದ ಪೋಸ್ಟ್ ಗೆ ಕಮೆಂಟ್ ಮಾಡಿದ್ದೇನೆ ಅಷ್ಟೆ. ಹಿಂದೂ ದೇವರ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ್ದರು. ಇದಕ್ಕೆ ಪ್ರತಿಯಾಗಿ ಕಮೆಂಟ್ ಅಷ್ಟೇ ಮಾಡಿದ್ದೆ ಎಂದು ತನ್ನ ಪೋಸ್ಟ್ ಬಗ್ಗೆ ಆರೋಪಿ ಸ್ಪಷ್ಟನೆ ನೀಡಿದ್ದಾನೆ.

ಪೋಸ್ಟ್ ಮಾಡಿದ ಬಳಿಕ ಅಖಂಡ ಶ್ರೀನಿವಾಸ್ ಡಿಲೀಟ್ ಮಾಡುವಂತೆ ತಿಳಿಸಿದರು. ಬಳಿಕ ನಾನು ಹಾಕಿದ್ದ ಪೋಸ್ಟ್ ಡಿಲೀಟ್ ಮಾಡಿದ್ದೆ. ಗಲಭೆಯ ಮಾಸ್ಟರ್ ಮೈಂಡ್ ಪೈರೋಜ್ ಖಾನ್ ಒಂದು ಪೋಸ್ಟ್ ಮಾಡಿದ್ದ, ಇದಕ್ಕೆ ಉತ್ತರವಾಗಿ ಕಮೆಂಟ್ ಮಾಡಿದ್ದೆ. ಕಮೆಂಟ್ ಮಾಡೋ ಸಲುವಾಗಿ ಗೂಗಲ್ ನಲ್ಲಿ ಇಮೇಜ್ ಹುಡುಕಿದ್ದೆ. ಬಳಿಕ ಒಂದು ಇಮೇಜ್ ತೆಗೆದು ಕಮೆಂಟ್ ಬಾಕ್ಸ್ ನಲ್ಲಿ ಪೋಸ್ಟ್ ಮಾಡಿದ್ದೆ ಎಂದು ನವೀನ್ ತಿಳಿಸಿದ್ದಾನೆ.

ಪಾದರಾಯನಪುರ ಪುಂಡರ ಗಲಭೆ, ಸಿಎಎ ಮತ್ತು ಎನ್‍ಆರ್‍ಸಿ ಪ್ರತಿಭಟನೆ ವೇಳೆಯು ಕಮೆಂಟ್ ಮಾಡಿದ್ದೆ. ಬೇರೆಯವರ ಪೋಸ್ಟ್ ಸಲುವಾಗಿಯಷ್ಟೇ ನಾನು ಕಮೆಂಟ್ ಮಾಡಿದ್ದೇನೆ. ನಾನಾಗಿ ಯಾವುದೇ ಪೋಸ್ಟ್ ಮಾಡಿಲ್ಲ. ರಾಮ ಜನ್ಮಭೂಮಿ ಶಿಲಾನ್ಯಾಸದ ವೇಳೆ ಏರಿಯಾದಲ್ಲಿ ಪಟಾಕಿ ಸಿಡಿಸಿ ಸಿಹಿ ಹಂಚಿಕೆ ಮಾಡಿದ್ದೆ. ಈ ವೇಳೆ ಅಪರಿಚಿತ ನಂಬರ್ ಗಳಿಂದ ನನಗೆ ಬೆದರಿಕೆ ಕರೆಗಳು ಬಂದಿದ್ದವು. ದುಷ್ಕರ್ಮಿಗಳು ಫೋನ್ ಮಾಡಿ ಬೆದರಿಕೆ ಹಾಕಿದ್ದರು ಎಂದು ಆರೋಪಿಸಿದ್ದಾರೆ.

ಬೆದರಿಕೆ ಕರೆಗಳಿಗೆ ಜಗ್ಗದೆ ನನ್ನ ಕೆಲಸ ಮುಂದುವರೆಸಿದ್ದೆ ಎಂದು ಪೊಲೀಸರ ವಿಚಾರಣೆ ವೇಳೆ ಹಿಂದಿನ ಘಟನೆಗಳ ಬಗ್ಗೆ ಆರೋಪಿ ನವೀನ್ ಬಾಯ್ಬಿಟ್ಟಿದ್ದಾನೆ. ನವೀನ್ ಹೇಳಿಕೆಗಳನ್ನು ಪೊಲೀಸರು ದಾಖಲಿಸಿಕೊಂಡಿದ್ದಾರೆ.

Comments

Leave a Reply

Your email address will not be published. Required fields are marked *