ಹುಬ್ಬಳ್ಳಿಯಿಂದ ಉತ್ತರ ಪ್ರದೇಶದ ಬಸ್ತಿಗೆ ಹೊರಟ ಶ್ರಮಿಕ ಎಕ್ಸ್‌ಪ್ರೆಸ್‌ ರೈಲು

ಹುಬ್ಬಳ್ಳಿ: ಧಾರವಾಡ ಜಿಲ್ಲೆ ಸೇರಿದಂತೆ ಉತ್ತರ ಕರ್ನಾಟಕದಲ್ಲಿ ಕೆಲಸ ಮಾಡುವ ಉತ್ತರ ಪ್ರದೇಶ ಮೂಲದ ಪ್ರವಾಸಿ ಕಾರ್ಮಿಕರನ್ನು ಅವರ ರಾಜ್ಯಕ್ಕೆ ಕಳುಹಿಸಲು ಹುಬ್ಬಳ್ಳಿಯಿಂದ ಉತ್ತರ ಪ್ರದೇಶದ ಬಸ್ತಿಗೆ ಇಂದು ವಿಶೇಷ ರೈಲು ಪ್ರಯಾಣಿಸಿತು.

ಶ್ರಮಿಕ ಎಕ್ಸ್‌ಪ್ರೆಸ್‌ ರೈಲು ಮಧ್ಯಾಹ್ನ 12 ಗಂಟೆಗೆ ಹುಬ್ಬಳ್ಳಿ ರೈಲ್ವೆ ನಿಲ್ದಾಣದಿಂದ ಹೊರಟಿದೆ. ಈ ರೈಲಿನ ಮೂಲಕ 1,443 ಪ್ರಯಾಣಿಕರು ತಮ್ಮ ತಮ್ಮ ತವರಿಗೆ ತೆರಳಿದರು. ಉತ್ತರ ಪ್ರದೇಶಕ್ಕೆ ಹೋಗುತ್ತಿರುವ ಎಲ್ಲ ಪ್ರವಾಸಿ ಪ್ರಯಾಣಿಕರಿಗೆ ಬೆಳಗ್ಗೆ 6 ಗಂಟೆಯಿಂದಲೇ 15 ವಿಶೇಷ ಕೌಂಟರ್‌ಗಳಲ್ಲಿ ಆರೋಗ್ಯ ತಪಾಸಣೆ ನಡೆಸಲಾಗಿದೆ.

ಆರೋಗ್ಯ ತಪಾಸಣೆ ನಂತರ ಆರೋಗ್ಯ ಪ್ರಮಾಣ ಪತ್ರ ಹಾಗೂ ರೈಲ್ವೇ ಪ್ರಯಾಣದ ಟಿಕೆಟ್ ನೀಡಿದ ನಂತರ ಪ್ರಯಾಣಿಕರನ್ನ ರೈಲಿನಲ್ಲಿ ಪ್ರಯಾಣಿಸಲು ಅನುಮತಿ ಕಲ್ಪಿಸಲಾಯಿತು. ಆದರೆ ರೈಲ್ವೇ ನಿಲ್ದಾಣದೊಳಗೆ ಪ್ರಯಾಣಿಕರ ಸಂಬಂಧಿಕರು ಹಾಗೂ ಸ್ಥಳೀಯ ಮುಖಂಡರಿಗೂ ಸಹ ರೈಲ್ವೆ ಇಲಾಖೆ ಅಧಿಕಾರಿಗಳು ಪ್ರವೇಶ ನೀಡಲಿಲ್ಲ.

Comments

Leave a Reply

Your email address will not be published. Required fields are marked *