ಹುಳುಬಿದ್ದ ಆಹಾರ ಕಿಟ್ ಹಂಚಿಕೆ – ಶಾಸಕ ಶಿವನಗೌಡ ನಾಯಕ್ ಮೇಲೆ ಆರೋಪ

ರಾಯಚೂರು: ಜಿಲ್ಲೆಯ ದೇವದುರ್ಗ ತಾಲೂಕಿನ ಮದರಕಲ್ ಗ್ರಾಮದಲ್ಲಿ ಶಾಸಕ ಶಿವನಗೌಡ ನಾಯಕ್ ವಿತರಿಸಿದ ಆಹಾರ ಕಿಟ್‍ನಲ್ಲಿ ಹುಳು, ನುಸಿ ಪತ್ತೆಯಾಗಿವೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಲಾಕ್ ಡೌನ್ ಸಂದರ್ಭದಲ್ಲಿ ಹಟ್ಟಿ ಚಿನ್ನದಗಣಿ ಕಂಪನಿ ಬಡವರಿಗೆ ವಿತರಿಸಲು ನೀಡಿದ್ದ ಫುಡ್ ಕಿಟ್‍ಗಳನ್ನ ಹಂಚಲಾಗಿದ್ದು ಇದರಲ್ಲಿ ಹುಳು ಪತ್ತೆಯಾಗಿವೆ.

ತಹಶೀಲ್ದಾರರ ಮುಖಾಂತರ ಬಡವರಿಗೆ ಹಂಚಿಕೆ ಮಾಡಲು ಕೊಟ್ಡಿದ್ದ 2 ಸಾವಿರ ಫುಡ್ ಕಿಟ್‍ನನ್ನು ಲಾಕ್ ಡೌನ್ ಸಂದರ್ಭದಲ್ಲಿ ವಿತರಿಸದೇ ಶನಿವಾ ಸ್ವತಃ ದೇವದುರ್ಗ ಶಾಸಕ ಶಿವನಗೌಡ ನಾಯಕ್ ವಿತರಿಸಿದ್ದರು. ಶಾಸಕ ಶಿವನಗೌಡ ವಿತರಿಸಿದ ಫುಡ್ ಕಿಟ್‍ಗಳಲ್ಲಿ ಹುಳು, ನುಸಿ ಪತ್ತೆಯಾಗಿದ್ದು, ಧಾನ್ಯಗಳು ಉಂಡೆಯಾಗಿದ್ದು ಬಳಸಲು ಯೋಗ್ಯವಾಗಿಲ್ಲದ್ದಾಗಿದೆ.

ಹಾಳಾಗಿರುವ ಪದಾರ್ಥಗಳನ್ನು ವಿತರಣೆ ಮಾಡಿರುವುದಾಗಿ ಗ್ರಾಮಸ್ಥರು ಆರೋಪಿಸಿದ್ದಾರೆ. ಆಹಾರ ಕಿಟ್‍ನ್ನು ಮನೆಗೆ ತಂದು ನೋಡಿದಾಗ ಹಾಳಾದ ಪದಾರ್ಥಗಳನ್ನ ಕಂಡು ಶಾಸಕರಿಗೆ ಹಾಗೂ ಅಧಿಕಾರಿಗಳಿಗೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Comments

Leave a Reply

Your email address will not be published. Required fields are marked *