ಮರಕ್ಕೆ ಡಿಕ್ಕಿ ಹೊಡೆದ ಸ್ವಿಫ್ಟ್ ಕಾರ್- ಓರ್ವನ ದುರ್ಮರಣ

ಕಾರವಾರ: ಚಾಲಕನ ನಿಯಂತ್ರಣ ತಪ್ಪಿ ಸ್ವಿಫ್ಟ್ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಮೃತಪಟ್ಟು ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆದಿದೆ.

ಇಲ್ಲಿನ ಭಟ್ಕಳ ಪಟ್ಟಣದ ಸಾಗರ ರಸ್ತೆಯ ಕಿತ್ತರೆ ಬಸ್ ನಿಲ್ದಾಣದ ಬನೀ ಅಪಘಾತ ಸಂಭವಿಸಿದೆ. 18 ವರ್ಷದ ಸೈಫನ್ ಮೃತ ಯುವಕ. ಘಟನೆಯಲ್ಲಿ ಗಾಯಗೊಂಡವರನ್ನು ಕುಂದಾಪುರದ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ.

ಕಾರಿನಲ್ಲಿದ್ದವರು ಭಟ್ಕಳ ಪಟ್ಟಣದ ಮದೀನಾ ಕಾಲೋನಿ ನಿವಾಸಿಗಳಾಗಿದ್ದು, ಶಿವಮೊಗ್ಗ ಜಿಲ್ಲೆಯ ಸಾಗರದಿಂದ ಭಟ್ಕಳಕ್ಕೆ ಬರುವಾಗ ಅಪಘಾತ ನಡೆದಿದೆ. ಭಟ್ಕಳ ನಗರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Comments

Leave a Reply

Your email address will not be published. Required fields are marked *