ಸುಳ್ವಾಡಿ ವಿಷಪ್ರಸಾದ ದುರಂತಕ್ಕೆ ಇಂದಿಗೆ ಒಂದು ತಿಂಗಳು- ಇನ್ನೂ ಡಿಸ್ಚಾರ್ಜ್ ಆಗಿಲ್ಲ ಅಸ್ವಸ್ಥರು

ಚಾಮರಾಜನಗರ: ಸುಳ್ವಾಡಿ ಮಾರಮ್ಮ ದೇವಸ್ಥಾನದ ವಿಷಪ್ರಸಾದ ಸೇವೆನೆ ಘಟನೆ ನಡೆದು ಇಂದಿಗೆ ಒಂದು ತಿಂಗಳಾಗಿದ್ದು, ಪ್ರಸಾದ ಸೇವಿಸಿದ ಭಕ್ತರು ಇನ್ನೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಡಿಸೆಂಬರ್ 14ರಂದು ಚಾಮರಾಜನಗರದ ಸುಳ್ವಾಡಿಯಲ್ಲಿ ಭಕ್ತರು ವಿಷ ಪ್ರಸಾದವನ್ನು ಸೇವಿಸಿದ್ದರು. ಈಗ ಈ ಘಟನೆ ನಡೆದು ಒಂದು ತಿಂಗಳಾದರೂ ಪ್ರಸಾದ ತಿಂದ ಅಸ್ವಸ್ಥರು ಆಸ್ಪತ್ರೆಯಿಂದ ಇನ್ನೂ ಡಿಸ್ಚಾರ್ಜ್ ಆಗಿಲ್ಲ. ನಾಲ್ವರು ಅಸ್ವಸ್ಥರು ಇನ್ನೂ ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಸಾದ ಸೇವಿಸಿದ ನಾಲ್ಕು ಜನ ಅಸ್ವಸ್ಥರು ಮೈಸೂರಿನ ನಾಲ್ಕು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಾಲ್ವರಲ್ಲಿ ಓರ್ವ ಅಸ್ವಸ್ಥರಿಗೆ ವೆಂಟಿಲೇಟರ್ ನಲ್ಲೇ ಚಿಕಿತ್ಸೆ ನೀಡಿದರೆ, ಉಳಿದ ಮೂವರು ಜನರಿಗೆ ವಾರ್ಡ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಈ ವಿಷ ಪ್ರಸಾದದ ಘಟನೆಯಲ್ಲಿ ಒಟ್ಟು 140ಕ್ಕೂ ಹೆಚ್ಚು ಮಂದಿ ವಿಷ ಪ್ರಸಾದ ಸೇವನೆ ಮಾಡಿದ್ದರು. 140 ಮಂದಿಯಲ್ಲಿ 120ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದರು. ಅಲ್ಲದೇ ಈ ವಿಷ ಪ್ರಸಾದ ಸೇವಿಸಿ 17 ಮಂದಿ ಘಟನೆಯಲ್ಲಿ ಮೃತರಾಗಿದ್ದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Comments

Leave a Reply

Your email address will not be published. Required fields are marked *