10 ಸಾವಿರ ಕುಟುಂಬಗಳಿಗೆ ಆಹಾರ ಕಿಟ್ ವಿತರಣೆಗೆ ನಿಖಿಲ್ ಕುಮಾರಸ್ವಾಮಿ ಚಾಲನೆ

ತುಮಕೂರು: ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತುಮಕೂರಿನಲ್ಲಿಂದು 10 ಸಾವಿರ ಕುಟುಂಬಗಳಿಗೆ ಆಹಾರ ಕಿಟ್ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ತುಮಕೂರು ಗ್ರಾಮಾಂತರ ಕ್ಷೇತ್ರದ ಬಳ್ಳಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಆಹಾರ ಕಿಟ್ ವಿತರಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಸುಮಾರು 10 ಸಾವಿರ ಕುಟುಂಬಗಳಿಗೆ ಕಿಟ್ ಗಳನ್ನು ಕಾರ್ಯಕ್ರಮದಲ್ಲಿ ವಿತರಿಸಲಾಯಿತು. ಇದನ್ನೂ ಓದಿ: ಕೊರೊನಾ ವಾರಿಯರ್​​​ಗಳಿಗೆ ಆಹಾರ ಕಿಟ್ ವಿತರಿಸಿದ ನಿಖಿಲ್ ಕುಮಾರಸ್ವಾಮಿ

ತುಮಕೂರು ಗ್ರಾಮಾಂತರ ಕ್ಷೇತ್ರದ ಶಾಸಕ ಡಿ.ಸಿ. ಗೌರಿಶಂಕರ್ ನೇತೃತ್ವದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ದಿನಸಿ ಪದಾರ್ಥಗಳ ಕಿಟ್, ತರಕಾರಿ, ಹಣ್ಣು-ಹಂಪಲು ಹಾಗೂ ಮಾಸ್ಕ್ ವಿತರಣೆ ಮಾಡಲಾಯಿತು. ಕೊರೊನಾದಿಂದಾಗಿ ಸಂಕಷ್ಟಕ್ಕೆ ಒಳಗಾಗಿದ್ದ ಜನರಿಗೆ ಆಹಾರ ಕಿಟ್ ಉಚಿತವಾಗಿ ನೀಡುವ ಮೂಲಕ ನಿಖಿಲ್ ಕುಮಾರಸ್ವಾಮಿ ಜನ ಸೇವೆಗೆ ಮುಂದಾಗಿದ್ದಾರೆ.

Comments

Leave a Reply

Your email address will not be published. Required fields are marked *