ಕರ್ನಾಟಕ ಸೇರಿದಂತೆ 7 ರಾಜ್ಯಗಳಿಂದ 10 ದಿನಗಳ ಪ್ರತಿಭಟನೆ- ಜೂನ್ 6ರಂದು ಬೀದಿಗಿಳಿಯಲಿರುವ ರೈತರು

ಬೆಂಗಳೂರು: ಬೆಳೆದ ಬೆಳೆಗೆ ಸೂಕ್ತ ಬೆಲೆ, ರೈತರ ಸಾಲ ಮನ್ನಾ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ನಗರದ ಗಾಂಧಿಪ್ರತಿಮೆ ಬಳಿ ಬೃಹತ್ ಪ್ರತಿಭಟನೆ ನಡೆಯಲಿದೆ ಅಂತ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ತಿಳಿಸಿದ್ದಾರೆ.

ಈ ಕುರಿತು ನಗರದಲ್ಲಿ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ದೇಶದಾದ್ಯಂತ 10 ದಿನಗಳ 7 ರಾಜ್ಯಗಳ ರೈತರು ಶುಕ್ರವಾರ ಪ್ರತಿಭಟನೆಯನ್ನು ಆರಂಭಿಸಿದ್ದಾರೆ. ಹೀಗಾಗಿ ಜೂನ್ 6ರಂದು ಕರ್ನಾಟಕ ರೈತರು ಬೀದಿಗೆ ಇಳಿಯಲಿದ್ದಾರೆ. ಇದನ್ನೂ ಓದಿ: ಹಾಲು, ತರಕಾರಿ ರಸ್ತೆಗೆ ಸುರಿದು ಪ್ರತಿಭಟನೆ ಪ್ರಾರಂಭಿಸಿದ ರೈತರು

ಜೂನ್ 6ರಂದು ಕರ್ನಾಟಕದಲ್ಲಿ ಸಾಂಕೇತಿಕ ಪ್ರತಿಭಟನೆ ನಡೆಯಲಿದೆ. ರಾಷ್ಟ್ರೀಯ ಕಿಸಾನ್ ಮಹಾಸಂಘದ ನೇತೃತ್ವದಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಕರ್ನಾಟಕ ರೈತರ ಬೆಂಬಲ ಸೂಚಿಸಿದ್ದಾರೆ. ಅಲ್ಲದೇ ದೇಶದ್ಯಾಂತ 130ಕ್ಕೂ ಹೆಚ್ಚು ರೈತ ಸಂಘಟನೆಗಳು ಬೆಂಬಲ ಸೂಚಿಸಿವೆ ಅಂದ್ರು. ಇದನ್ನೂ ಓದಿ: ಜೂನ್ 1 ರಿಂದ ದೇಶಾದ್ಯಂತ ಹಾಲು, ತರಕಾರಿ ಸರಬರಾಜು ಮಾಡದಿರಲು ರೈತರ ನಿರ್ಧಾರ!

ರೈತರು ಬೆಳೆದ ತರಕಾರಿ ಹಾಗೂ ಹಾಲಿನ ಉತ್ಪನ್ನಗಳನ್ನು ಮಾರುಕಟ್ಟೆಗೆ ತರದಿರಲು ನಿರ್ಧರಿಸಿದ್ದಾರೆ. ಆದ್ರೆ ಕರ್ನಾಟಕದ ರೈತರು ಉತ್ಪನ್ನ ಮಾಡುತ್ತಾರೆ. ಸಾಂಕೇತಿಕ ಧರಣಿಗೆ ಬೆಂಬಲ ನೀಡಲಿದ್ದಾರೆ. ಸಾವಿರಾರು ರೈತರು ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿದ್ದಾರೆ ಅಂತ ಅವರು ಹೇಳಿದ್ರು.

Comments

Leave a Reply

Your email address will not be published. Required fields are marked *