ಪವನ್ ಕಲ್ಯಾಣ್ ಸಿನಿಮಾದ ನೋಡಲು ಹಣ ನೀಡದ್ದಕ್ಕೆ 11ರ ಬಾಲಕ ಆತ್ಮಹತ್ಯೆ

ಹೈದರಾಬಾದ್: ಟಾಲಿವುಡ್ ಪವರ್ ಸ್ಟಾರ್ ನಟ ಪವನ್ ಕಲ್ಯಾಣ್ ಅಭಿನಯದ ಬಹುನಿರೀಕ್ಷಿತ ಭೀಮ್ಲಾ ನಾಯಕ್ ಸಿನಿಮಾ ಟಿಕೆಟ್ ಖರೀದಿಸಲು ಪೋಷಕರು ಹಣ ನೀಡಲು ನಿರಾಕರಿಸಿದ್ದಕ್ಕೆ 11 ವರ್ಷದ ಬಾಲಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ.

ಮೃತ ದುರ್ದೈವಿಯನ್ನು ಪಿ. ನವದೀಪ್ ಎಂದು ಗುರುತಿಸಲಾಗಿದ್ದು, ಈತ 8 ನೇ ತರಗತಿಯ ವಿದ್ಯಾರ್ಥಿಯಾಗಿದ್ದಾನೆ. ನವದೀಪ್ ನಟ ಪವನ್ ಕಲ್ಯಾಣ್ ಅವರ ದೊಡ್ಡ ಅಭಿಮಾನಿಯಾಗಿದ್ದು, ತನ್ನ ಸ್ನೇಹಿತರೊಂದಿಗೆ ಸಿನಿಮಾ ವೀಕ್ಷಿಸಲು ಯೋಜನೆ ರೂಪಿಸಿದ್ದ. ಇದನ್ನೂ ಓದಿ: ಕೆಂಪುಕೋಟೆ ಮೇಲೆ ಸಿಖ್‌ ಬಾವುಟ ಹಾರಿಸಿದ್ದ ದೀಪ್ ಸಿಧು ರಸ್ತೆ ಅಪಘಾತದಲ್ಲಿ ಸಾವು

ಫೆಬ್ರವರಿ 25 ರ ಸೋಮವಾರ ಭೀಮ್ಲಾ ನಾಯಕ್ ಸಿನಿಮಾ ಬಿಡುಗಡೆಯಾಗುತ್ತಿದ್ದು, ಸಿನಿಮಾ ಬಿಡುಗಡೆಗೂ ಮುನ್ನವೇ ಟಿಕೆಟ್ ಬುಕ್ ಮಾಡಲು ತನ್ನ ತಂದೆಗೆ 300 ರೂ. ಹಣವನ್ನು ನೀಡಲು ಕೇಳಿದ್ದಾನೆ. ಆದರೆ ಅವರ ತಂದೆ ಎಷ್ಟೇ ಕೇಳಿದರೂ ಹಣ ನೀಡಲು ನಿರಾಕರಿಸಿದ್ದಾರೆ. ಇದರಿಂದ ಮನನೊಂದ ಬಾಲಕ ಮನೆಯ ಬಾಲ್ಕಾನಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಇದನ್ನೂ ಓದಿ: ಹಿರಿಯ ಗಾಯಕ ಬಪ್ಪಿ ಲಹರಿ ಇನ್ನಿಲ್ಲ

Comments

Leave a Reply

Your email address will not be published. Required fields are marked *