ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ- ಬಾಲಕಿ ಸ್ಥಳದಲ್ಲೇ ಸಾವು

ಮೈಸೂರು: 13 ವರ್ಷದ ಬಾಲಕಿಯನ್ನು ಕೆಎಸ್‌ಆರ್‌ಟಿಸಿ ಬಸ್ ಬಲಿ ತೆಗೆದುಕೊಂಡಿದೆ. ಜಿಲ್ಲೆಯ ನಂಜನಗೂಡಿನ ಚಾಮರಾಜನಗರ ರಸ್ತೆಯ ಮೇದಿಗರ ಬೀದಿ ಬಳಿ ಕೆಎಸ್‌ಆರ್‌ಟಿಸಿ ಬಸ್ ಬಾಲಕಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ಪರಿಣಾಮ ಬಾಲಕಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ.

ಅಶ್ವಿನಿ ಅಪಘಾತದಲ್ಲಿ ಮೃತಪಟ್ಟ ಬಾಲಕಿ. ಮೃತ ಅಶ್ವಿನಿ ನಂಜನಗೂಡು ಪಟ್ಟಣದ ಮೇದಿಗರ ಬೀದಿ ನಿವಾಸಿ ಸಿದ್ದರಾಜು ಎಂಬವರ ಪುತ್ರಿ. ಬಸ್ ಬಾಲಕಿಗೆ ಡಿಕ್ಕಿ ಹೊಡೆದ ವೇಳೆ ಆಕ್ರೋಶಗೊಂಡ ಜನರು ಕಲ್ಲು ತೂರಾಟ ನಡೆಸಿ ಬಸ್ಸಿನ ಕಿಟಕಿ ಗಾಜುಗಳನ್ನು ಪುಡಿ ಪುಡಿ ಮಾಡಿದ್ದಾರೆ.

ಈ ವೇಳೆ ಗಾಯಗೊಂಡ ಬಸ್ ಚಾಲಕನನ್ನು ನಂಜನಗೂಡು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ. ಇನ್ನು ಘಟನಾ ಸ್ಥಳದಲ್ಲಿ ಪೋಷಕರ ಆಕ್ರಂದನ ಮುಗಿಲು ಮುಟ್ಟಿದ್ದು, ಭಾರೀ ಸಂಖ್ಯೆಯಲ್ಲಿ ಜನರು ಸೇರಿದ್ದಾರೆ. ಈ ಸಂಬಂಧ ನಂಜನಗೂಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Comments

Leave a Reply

Your email address will not be published. Required fields are marked *