ರಾಜ್ಯದಲ್ಲಿ ಇಂದು 136 ಹೊಸ ಪ್ರಕರಣ- ಇಬ್ಬರು ಕೊರೊನಾದಿಂದ ಸಾವು

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತು ಸಾವಿನ ಸಂಖ್ಯೆ ಮತ್ತಷ್ಟು ಇಳಿಕೆ ಕಂಡಿದೆ. ಇಂದು ಒಟ್ಟು 136 ಕೇಸ್ ದಾಖಲಾಗಿದ್ದು, ಇಬ್ಬರು ಮೃತಪಟ್ಟಿದ್ದಾರೆ.

ಇತ್ತೀಚೆಗೆ ಪಾಸಿಟಿವ್ ಕೇಸ್‍ಗಳ ಸಂಖ್ಯೆ ಇಳಿಕೆ ಕಂಡರೂ, ಮರಣ ಪ್ರಕರಣ ಕಡಿಮೆಯಾಗಿರಲಿಲ್ಲ. ಇಂದು ಮರಣ ಪ್ರಕರಣ ಕೂಡ ಇಳಿಕೆ ಕಂಡಿದೆ. ಈ ಮೂಲಕ ಕೋವಿಡ್-19 ಮರಣ ಪ್ರಮಾಣ ಶೇ.1.47% ರಷ್ಟಿದೆ. ಬಾಗಲಕೋಟೆ, ಬೆಂಗಳೂರು ಗ್ರಾಮಾಂತರ, ಬೀದರ್, ಚಾಮರಾಜನಗರ, ಗದಗ, ಹಾವೇರಿ, ಕೊಡಗು, ಕೋಲಾರ, ಕೊಪ್ಪಳ. ಮಂಡ್ಯ, ರಾಯಚೂರು, ಉಡುಪಿ ಹಾಗೂ ವಿಜಯಪುರದಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ. ಪಾಸಿಟಿವಿಟಿ ರೇಟ್ 0.29%ಕ್ಕೆ ಇಳಿಕೆ ಕಂಡಿದೆ. ಜೊತೆಗೆ ಸಕ್ರಿಯ ಪ್ರಕರಣಗಳ ಸಂಖ್ಯೆ 2,622ಕ್ಕೆ ಇಳಿಮುಖಗೊಂಡಿದೆ. ಬೆಂಗಳೂರಿನಲ್ಲಿ ಪಾಸಿಟಿವ್ ಕೇಸ್‍ಗಳ ಸಂಖ್ಯೆ ಮತ್ತಷ್ಟು ಇಳಿಕೆ ಕಂಡಿದ್ದು, ಇಂದು ಒಟ್ಟು 87 ಹೊಸ ಕೇಸ್ ಪತ್ತೆಯಾಗಿದೆ.

ಒಟ್ಟು 275 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈವರೆಗೆ ರಾಜ್ಯದಲ್ಲಿ ಒಟ್ಟು 39,43,642 ಮಂದಿಗೆ ಕೊರೊನಾ ಬಂದಿದೆ. ಒಟ್ಟು 39,00,963 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಒಟ್ಟು 47,476 ಸ್ಯಾಂಪಲ್ (ಆರ್ ಟಿ ಪಿಸಿಆರ್ 38,641 + 8835 ರ್ಯಾಪಿಡ್ ಆಂಟಿಜನ್)ಗಳನ್ನು ಇಮದು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದನ್ನೂ ಓದಿ: ಯೋಗಿ ಸಿಎಂ ಆಗುವವರೆಗೆ ಗಡ್ಡ ತೆಗಿಯಲ್ಲ ಎಂದು ಶಪಥ ಮಾಡಿದಾತನ ಕಥೆಯಿದು!

ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ ಬಾಗಲಕೋಟೆ 0, ಬಳ್ಳಾರಿ 2, ಬೆಳಗಾವಿ 3, ಬೆಂಗಳೂರು ಗ್ರಾಮಾಂತರ 0, ಬೆಂಗಳೂರು ನಗರ 87, ಬೀದರ್ 0, ಚಾಮರಾಜನಗರ 0, ಚಿಕ್ಕಬಳ್ಳಾಪುರ 2, ಚಿಕ್ಕಮಗಳೂರು 1, ಚಿತ್ರದುರ್ಗ 10, ದಕ್ಷಿಣ ಕನ್ನಡ 2, ದಾವಣಗೆರೆ 2, ಧಾರವಾಡ 3, ಗದಗ 0, ಹಾಸನ 1, ಹಾವೇರಿ 0, ಕಲಬುರಗಿ 5, ಕೊಡಗು 0, ಕೋಲಾರ 0, ಕೊಪ್ಪಳ 0, ಮಂಡ್ಯ 0, ಮೈಸೂರು 6, ರಾಯಚೂರು 0, ರಾಮನಗರ 2, ಶಿವಮೊಗ್ಗ 1, ತುಮಕೂರು 6, ಉಡುಪಿ 0, ಉತ್ತರ ಕನ್ನಡ 2, ವಿಜಯಪುರ 0 ಮತ್ತು ಯಾದಗಿರಿಯಲ್ಲಿ 1 ಪಾಸಿಟಿವ್ ಪ್ರಕರಣ ದಾಖಲಾಗಿದೆ.

Comments

Leave a Reply

Your email address will not be published. Required fields are marked *