ಮನೆಯ ಮೇಲ್ಛಾವಣಿಯಲ್ಲಿ ವಾಸವಿದ್ದ 15 ಅಡಿ ಉದ್ದದ ಕಾಳಿಂಗ ಸರ್ಪದ ರಕ್ಷಣೆ

ಚಿಕ್ಕಮಗಳೂರು: ಕಳೆದ ಮೂರು ದಿನದಿಂದ ಮನೆಯ ಚಾವಣಿಯಲ್ಲಿ ವಾಸವಿದ್ದ 15 ಅಡಿ ಉದ್ದದ ಕಾಳಿಂಗ ಸರ್ಪವನ್ನು ರಕ್ಷಣೆ ಮಾಡಿರುವ ಘಟನೆ ಮೂಡಿಗೆರೆಯ ಆಲೆಖಾನ್ ಹೊರಹಟ್ಟಿ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಗಿರೀಶ್ ಎಂಬವರ ಮನೆಯಲ್ಲಿ ಕಳೆದ ಮೂರು ದಿನಗಳಿಂದ ಕಾಳಿಂಗ ಸರ್ಪ ವಾಸವಿದ್ದು, ಕೆರೆ ಹಾವು ನುಂಗಿ ಕಾರಣ ಬೇರೆಡೆ ತೆರಳಲು ಸಾಧ್ಯವಾಗಿಲ್ಲ ಎನ್ನಲಾಗಿದೆ. ಈ ವೇಳೆ ಕಾಳಿಂಗ ಸರ್ಪ ನೋಡಿ ಭಯಗೊಂಡ ಮನೆ ಮಾಲೀಕ ಗಿರೀಶ್ ಉರಗ ತಜ್ಞ ಸ್ನೇಕ್ ನರೇಶ್ ಅವರಿಗೆ ಮಾಹಿತಿ ನೀಡಿದ್ದಾರೆ.

ಗಿರೀಶ್ ಅವರ ಮಾಹಿತಿ ಮೇರೆಗೆ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಉರಗ ತಜ್ಞ ಸ್ನೇಕ್ ನರೇಶ್ ಸ್ಥಳಕ್ಕೆ ಬಂದು ಕಾಳಿಂಗ ಸರ್ಪವನ್ನು ಸೆರೆ ಹಿಡಿಯಲು ಸತತ ಒಂದು ಗಂಟೆ ಕಾರ್ಯಾಚರಣೆ ನಡೆಸಿದ್ದಾರೆ. ಈ ವೇಳೆ ಮನೆಯ ಚಾವಣೆಯಲ್ಲಿದ್ದ ಕಾಳಿಂಗ ಸರ್ಪವನ್ನು ಬಿದಿರಿನ ಮೂಲಕ ಕೆಳಗೆ ಬೀಳಿಸಿ, ಬಳಿಕ ಸೆರೆ ಹಿಡಿಯುವ ಸಂದರ್ಭದಲ್ಲಿ ಕಾಳಿಂಗ ಸರ್ಪ ನುಂಗಿದ ಹಾವನ್ನು ಹೊರ ಹಾಕಲು ಯತ್ನಿಸಿ ಸಾಧ್ಯವಾಗದೆ ತಪ್ಪಿಸಿಕೊಳ್ಳು ಯತ್ನಿಸಿದೆ. ಅರಣ್ಯ ಇಲಾಖೆ ಸಿಬ್ಬಂದಿ ವಿಜಯಕುಮಾರ್ ಹಾಗೂ ಸುರೇಶ್ ನೇತೃತ್ವದಲ್ಲಿ ಕಾಳಿಗ ಸೆರೆ ಹಿಡಿಯಲಾಯಿತು. ಸದ್ಯ ಸೆರೆ ಹಿಡಿರುವ ಕಾಳಿಂಗ ಸರ್ಪವನ್ನು ಅರಣ್ಯ ಇಲಾಖೆ ನೇತೃತ್ವದಲ್ಲಿ ಚಾರ್ಮಾಡಿ ಕಾಡಿಗೆ ಬಿಡಲಾಗಿದೆ. ಸದ್ಯ ಸರ್ಪದ ರಕ್ಷಣೆಯಿಂದ ಮನೆಯ ಮಾಲೀಕ ಗೀರಿಶ್ ಕುಟುಂಬದವರು ನಿಟ್ಟುಸಿರು ಬಿಟ್ಟಿದ್ದಾರೆ.

Comments

Leave a Reply

Your email address will not be published. Required fields are marked *