ವಾರಣಾಸಿ ಸರಣಿ ಬಾಂಬ್ ಸ್ಫೋಟ – 16 ವರ್ಷಗಳ ನಂತರ ಆರೋಪಿಯನ್ನು ಗುರುತಿಸಿದ ಹೈಕೋರ್ಟ್

BOMB BLAST

ಲಕ್ನೋ: ವಾರಣಾಸಿಯಲ್ಲಿ 2006ರಲ್ಲಿ ನಡೆದ ಸರಣಿ ಬಾಂಬ್ ಸ್ಫೋಟದಲ್ಲಿ ಭಾಗಿಯಾಗಿದ್ದ ವಲಿಯುಲ್ಲಾನನ್ನು ಉತ್ತರ ಪ್ರದೇಶದ ಗಾಜಿಯಾಬಾದ್‌ನ ಜಿಲ್ಲಾ ಸೆಷನ್ಸ್ ನ್ಯಾಯಾಲಯವು 16 ವರ್ಷಗಳ ನಂತರ ದೋಷಿ ಎಂದು ಘೋಷಿಸಿದೆ.

ಸರಣಿ ಬಾಂಬ್ ಸ್ಫೋಟ ಪ್ರಕರಣದಲ್ಲಿ ಭಾಗಿಯಾಗಿದ್ದ ಪ್ರಯಾಗರಾಜ್ ಜಿಲ್ಲೆಯ ಫುಲ್ಪುರ್ ಗ್ರಾಮದ ನಿವಾಸಿ ವಲಿಯುಲ್ಲಾನನ್ನು ದೋಷಿ ಎಂದು ಗುರುತಿಸಿದ್ದು ಜೂನ್ 6ರಂದು ಪ್ರಕಟಿಸಲಿದೆ. ಇದನ್ನೂ ಓದಿ: ಗೋ ಶಾಲೆಯಲ್ಲಿ ಒಂದು ತಿಂಗಳ ಕಾಲ ಸೇವೆ – ಷರತ್ತು ವಿಧಿಸಿ ಆರೋಪಿಗೆ ಜಾಮೀನು

CRIME

ಸ್ಫೋಟ ಪ್ರಕರಣಗಳು: 2006ರ ಮಾರ್ಚ್ 7ರಂದು ಉತ್ತರ ಪ್ರದೇಶದ ವಾರಣಾಸಿಯ ಸಂಕತ್ಮೋಚ್‌ನ ದೇವಸ್ಥಾನ ಮತ್ತು ಕ್ಯಾಂಟ್ ರೈಲು ನಿಲ್ದಾಣದಲ್ಲಿ ಬಾಂಬ್ ಸ್ಫೋಟ ಸಂಭವಿಸಿತ್ತು. ಇದರಲ್ಲಿ 30 ಮಂದಿ ಮೃತಪಟ್ಟು, ನೂರಾರು ಜನರು ಗಾಯಗೊಂಡಿದ್ದರು. 2006 ರ ಏಪ್ರಿಲ್ 5 ರಂದು ಉತ್ತರ ಪ್ರದೇಶ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಯಾಗರಾಜ್ ಜಿಲ್ಲೆಯ ಫುಲ್ಪುರ್ ಗ್ರಾಮದ ನಿವಾಸಿ ವಲಿಯುಲ್ಲಾನನ್ನು ಬಂಧಿಸಿದ್ದರು. ಹೈಕೋರ್ಟ್ನ ಆದೇಶದ ಮೇರೆಗೆ ಪ್ರಕರಣವನ್ನು ವಿಚಾರಣೆಗಾಗಿ ಗಾಜಿಯಾಬಾದ್‌ಗೆ ವರ್ಗಾಯಿಸಲಾಗಿತ್ತು.

Comments

Leave a Reply

Your email address will not be published. Required fields are marked *