ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಮೇಲೆ ಗುಂಡಿನ ದಾಳಿ

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

ಲಕ್ನೋ: ಭೀಮ್ ಆರ್ಮಿ (Bhim Army) ಮುಖ್ಯಸ್ಥ ಚಂದ್ರಶೇಖರ್ ಆಜಾದ್ (Chandrashekhar Azad) ಮೇಲೆ ಗುಂಡಿನ ದಾಳಿ ನಡೆದಿದೆ.

ಬುಧವಾರ ಸಂಜೆ ಉತ್ತರ ಪ್ರದೇಶದ ಸಹರಾನ್‌ಪುರ (Saharanpur) ಜಿಲ್ಲೆಯಲ್ಲಿ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದು, ಕೂಡಲೇ ಆಜಾದ್ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸಹರಾನ್‌ಪುರ ಎಸ್‌ಎಸ್‌ಪಿ ಡಾ.ವಿಪಿನ್ ತಾಡಾ ಪ್ರತಿಕ್ರಿಯಿಸಿ, ಅಂಬೇಡ್ಕರ್‌ವಾದಿ ಕಾರ್ಯಕರ್ತರ ಬೆಂಗಾವಲು ವಾಹನದ ಮೇಲೆ ಕಾರಿನಲ್ಲಿ ಬಂದ ಕೆಲವು ಶಸ್ತ್ರಸಜ್ಜಿತ ವ್ಯಕ್ತಿಗಳು ಗುಂಡು ಹಾರಿಸಿದ್ದಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ದುಬಾರಿಯಾದ ಟೊಮೆಟೋ ದರ- ರೈತರು ಫುಲ್ ಖುಷ್

ಹರ್ಯಾಣ ನೋಂದಣಿ ಸಂಖ್ಯೆಯ ಮಾರುತಿ ಸ್ವಿಫ್ಟ್‌ ಡಿಸೈರ್‌ ಕಾರಿನಲ್ಲಿ ಬಂದ ನಾಲ್ಕು ಮಂದಿ ಗುಂಡಿನ ದಾಳಿ ನಡೆಸಿದ್ದಾರೆ. ಚಂದ್ರಶೇಖರ್ ಆಜಾದ್ ಅವರು ಆರೋಗ್ಯವಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ಮಾಹಿತಿ ನೀಡಿದರು.

 

ಚಂದ್ರಶೇಖರ್ ಆಜಾದ್ ಅವರು ಫಾರ್ಚೂನರ್‌ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಗುಂಡು ಕಾರಿನ ಬಾಗಿಲು ಮತ್ತು ಸೀಟ್‌ ಮೇಲೆ ಬುಲೆಟ್‌ ಗುರುತು ಪತ್ತೆಯಾಗಿದೆ. ದುಷ್ಕರ್ಮಿಗಳು ಹಿಂಭಾಗದಿಂದ ಗುಂಡಿನ ದಾಳಿ ನಡೆಸಿದ್ದಾರೆ.