ನಿಂತಿದ್ದ ಲಾರಿಗೆ ಟ್ಯಾಂಕರ್ ಡಿಕ್ಕಿ- ಇಬ್ಬರ ಸಾವು

ಚಿತ್ರದುರ್ಗ: ಲಾರಿಗೆ ಟ್ಯಾಂಕರ್ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ಇಬ್ಬರು ದಾರುಣವಾಗಿ ಮೃತಪಟ್ಟ ಘಟನೆ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಹೆಗ್ಗೆರೆ ಗೇಟ್ ಬಳಿ ನಡೆದಿದೆ.

ಹಾಸನ ಮೂಲದ ಶಕೀಲ್(32) ಹಾಗೂ ಮಹಮ್ಮದ್ ರಫಿ(30) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅತಿವೇಗ ಹಾಗು ಅಜಾಗರೂಕತೆಯಿಂದ ಟ್ಯಾಂಕರ್ ಚಾಲಕ ವಾಹನವನ್ನು ಚಲಾಯಿಸಿಕೊಂಡು ಬಂದಿದ್ದು, ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದ್ದಾನೆ. ಪರಿಣಾಮ ಟ್ಯಾಂಕರ್ ನಲ್ಲಿದ್ದ ಶಕೀಲ್ ಹಾಗೂ ಮಹಮ್ಮದ್ ರಫಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಈ ಘಟನೆಯಿಂದಾಗಿ ಲಾರಿಯಲ್ಲಿದ್ದ ಚಾಲಕ ಹಾಗೂ ಕ್ಲೀನರ್ ಕೂಡ ಗಾಯಗೊಂಡಿದ್ದು, ಗಾಯಾಳುಗಳನ್ನು ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಸ್ಥಳಕ್ಕೆ ಚಳ್ಳಕೆರೆ ಡಿವೈಎಸ್ಪಿ ರೋಷನ್ ಜಮೀರ್ ಹಾಗು ಸಿಪಿಐ ತಿಮ್ಮಣ್ಣ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಸಂಬಂಧ ಚಳ್ಳಕೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv 

Comments

Leave a Reply

Your email address will not be published. Required fields are marked *