ಐಷರಾಮಿ ಬಸ್ಸಿಗೆ ಹಿಂದಿನಿಂದ ಕಂಟೈನರ್ ಡಿಕ್ಕಿ- ಇಬ್ಬರ ದುರ್ಮರಣ, ನಾಲ್ವರಿಗೆ ಗಾಯ

ಮುಂಬೈ: ಕಂಟೈನರ್ ಮತ್ತು ಲಕ್ಸುರಿ ಬಸ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟು, ನಾಲ್ವರು ಗಾಯಗೊಂಡ ಘಟನೆ ನಡೆದಿದೆ.

ಮುಂಬೈ-ಅಹಮಾದಾಬಾದ್ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಧಾನು ಎಂಬ ಪ್ರದೇಶದಲ್ಲಿ ಈ ಘಟನೆ ಬೆಳಗ್ಗೆ 7.30ರ ಸುಮಾರಿಗೆ ನಡೆದಿದೆ.

ಹೆದ್ದಾರಿಯ ಮೊದಲ ಓಣಿಯಲ್ಲಿ ಬಸ್ ಸಂಚರಿಸುತ್ತಿತ್ತು. ಈ ವೇಳೆ ಬಸ್ಸಿನ ಚಕ್ರದಲ್ಲಿ ವ್ಯತ್ಯಾಸವಾಗುತ್ತಿರುವುದು ಚಾಲಕನ ಗಮನಕ್ಕೆ ಬಂದಿದೆ. ಹೀಗಾಗಿ ಕೂಡಲೇ ಚಾಲಕ ಬಸ್ ನಿಲ್ಲಿಸಿದ್ದಾನೆ. ಈ ವೇಳೆ ವೇಗವಾಗಿ ಬರುತ್ತಿದ್ದ ಕಂಟೈನರ್ ಬಸ್ ಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ ಅಂತ ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಘಟನೆಯಿಂದಾಗಿ ಬಸ್ ಕ್ಲೀನರ್ ಹಾಗೂ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನು ಕಂಟೈನರ್ ನಲ್ಲಿದ್ದವರು ಸೇರಿ ಒಟ್ಟು ನಾಲ್ವರಿಗೆ ಗಾಯಗಳಾಗಿದ್ದು, ಇದರಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಅಂತ ವರದಿಯಾಗಿದೆ.

ಘಟನೆಯಿಂದ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಗಿದ್ದು, ವಾಹನ ಸವಾರರು ಪರದಾಡಿದ್ದಾರೆ. ಇನ್ನು ಮೃತರ ಗುರುತು ಪತ್ತೆಯಾಗಿಲ್ಲ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ ಎಂಬುದಾಗಿ ವರದಿಯಾಗಿದೆ.

Comments

Leave a Reply

Your email address will not be published. Required fields are marked *