2023ಕ್ಕೆ ನಾವು ಏನು ಅಂತ ತೋರಿಸ್ತೇವೆ: ರೇವಣ್ಣ

– ಅರವಿಂದ್ ಲಿಂಬಾವಳಿ ಥರ್ಡ್ ಕ್ಲಾಸ್

ಹಾಸನ: ಬಿಜೆಪಿ ಉಪಾಧ್ಯಕ್ಷ ಇದಾನಲ್ಲ ಅವನು ಥರ್ಡ್ ಕ್ಲಾಸ್. ಆತ ಬಿಜೆಪಿ ಉಪಾಧ್ಯಕ್ಷ ಆಗಲಿಕ್ಕೆ ಅನ್ ಫಿಟ್ ಎಂದು ಅರವಿಂದಲಿಂಬಾವಳಿ ವಿರುದ್ಧ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಕಿಡಿಕಾರಿದ್ದಾರೆ.

ನಗರದಲ್ಲಿ ಮಾತನಾಡಿದ ಅವರು, ಯಾವುದೇ ಕಾರಣಕ್ಕೂ ಜೆಡಿಎಸ್ ಮತ್ತು ಬಿಜೆಪಿ ವಿಲೀನ ಆಗುವ ಪ್ರಶ್ನೆಯೇ ಇಲ್ಲ. ದೇವೇಗೌಡರು ಬದುಕಿರುವವರೆಗೆ ಯಾವುದೇ ಪಕ್ಷದ ಜೊತೆ ಹೊಂದಾಣಿಕೆ ಇಲ್ಲ. ರಾಷ್ಟ್ರೀಯ ಪಕ್ಷಕ್ಕೆ ಹೀಗೆ ಹೇಳಿಕೆ ಶೋಭೆ ತರುವಂತಹದ್ದಲ್ಲ. ಗ್ರಾಮ ಪಂಚಾಯಿತಿ ಚುನಾವಣೆ ಹಿನ್ನೆಲೆಯಲ್ಲಿ ಜೆಡಿಎಸ್ ಪಕ್ಷವನ್ನು ಮುಗಿಸಬೇಕು ಎಂದು ಬಿಜೆಪಿ ಮತ್ತು ಕಾಂಗ್ರೆಸ್ ಅಪಪ್ರಚಾರ ಮಾಡುತ್ತಿವೆ ಹೊರತು ಬೇರೆ ಇನ್ಯಾವುದಕ್ಕೂ ಅಲ್ಲ. ಇಂತಹ ಹೇಳಿಕೆಗಳಿಂದ ಜೆಡಿಎಸ್ ಹೆದರುವುದಿಲ್ಲ ಎಂದರು.

ಜನವರಿಯ ನಂತರ ಪಕ್ಷ ಎಂದರೇನು ಎಂದು ತೋರಿಸುತ್ತೇವೆ. ಕುಮಾರಸ್ವಾಮಿ ಮತ್ತು ದೇವೇಗೌಡರ ಜೊತೆ ಮಾತನಾಡಿದ್ದೇನೆ. ಯಾವುದೇ ಸರ್ಕಾರ ಬಂದರೂ ದೇವೇಗೌಡರ ಕುಟುಂಬಕ್ಕೆ ಕಿರುಕುಳ ನೀಡೋದು ಹೊಸತೇನಲ್ಲ. ಆದರೆ ನಾವು ಸರ್ಕಾರಕ್ಕೆ ತೊಂದರೆ ಯಾಕೆ ಕೊಡಬೇಕೆಂದು ಸುಮ್ಮನಾಗಿದ್ದೆವು ಅಷ್ಟೆ. 2023ಕ್ಕೆ ನಾವು ಏನು ಅಂತ ತೋರಿಸುತ್ತೇವೆ. ಹೆದರಿಕೊಂಡು ಎಲ್ಲಿಗೂ ಹೋಗುವುದಿಲ್ಲ. ನಮ್ಮ ಕಾರ್ಯಕರ್ತರು ಇನ್ನೂ ರಾಜ್ಯದಲ್ಲಿದ್ದಾರೆ. ದ್ವೇಷದ ರಾಜಕಾರಣದಿಂದ ಬಿಜೆಪಿಗೆ ಮುಂದಿನ ಚುನಾವಣೆಯಲ್ಲಿ ಜನ ಪಾಠ ಕಲಿಸಲಿದ್ದಾರೆ ಎಂದರು.

Comments

Leave a Reply

Your email address will not be published. Required fields are marked *