ನೇಣು ಬಿಗಿದ ಸ್ಥಿತಿಯಲ್ಲಿ ಯುವತಿ ಶವ ಪತ್ತೆ

ಶಿವಮೊಗ್ಗ: ಸಾಗರದ ತಿಲಕ್ ರಸ್ತೆಯ ಕೇಶವ ಜ್ಯುವೆಲ್ಲರಿ ಅಂಗಡಿಯ ಹಿಂಭಾಗದ ಬಾವಿಯಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆಯಾಗಿದೆ.

ಯುವತಿಯನ್ನು ಸುಚಿತ್ರ ಶೆಟ್ಟಿ (25) ಎಂದು ಗುರುತಿಸಲಾಗಿದ್ದು, ತಾಲೂಕಿನ ಹಂಸಗಾರು ಜಡ್ಡುಗದ್ದೆ ನಿವಾಸಿ ರಘುವೀರ ಶೆಟ್ಟಿ ಅವರ ಪುತ್ರಿ ಎಂದು ತಿಳಿದು ಬಂದಿದೆ. ಸಾಗರದ ಅಣಲೇಕೊಪ್ಪದ ತಮ್ಮ ಸಹೋದರ ಮಾವನ ಮನೆಯಲ್ಲಿ ವಾಸವಾಗಿದ್ದ ಮೃತ ಸುಚಿತ್ರ, ತಿಲಕ್ ರಸ್ತೆಯ ಕೇಶವ ಜ್ಯುವೆಲ್ಲರಿ ಅಂಗಡಿಯಲ್ಲಿ ನಾಲ್ಕೈದು ವರ್ಷಗಳಿಂದ ಕೆಲಸ ಮಾಡುತ್ತಿದ್ದಳು.

ದಿನ ನಿತ್ಯದಂತೆ ನಿನ್ನೆ ಸಹ ಕೆಲಸಕ್ಕೆ ಬಂದಿದ್ದ ಸುಚಿತ್ರ ರಾತ್ರಿ 8:30 ಸುಮಾರಿಗೆ ಮನೆಗೆ ಹೊರಟಿದ್ದಾಳೆ. 10:30 ಆದರೂ ಮನೆಗೆ ಬಾರದಿದ್ದಾಗ ಕುಟುಂಬಸ್ಥರು ಮಾಲೀಕರಿಗೆ ವಿಚಾರ ತಿಳಿಸಿದ್ದಾರೆ. ನಂತರ ರಾತ್ರಿ ಯುವತಿಗೆ ಹುಡುಕಾಟ ನಡೆಸಿದ್ದಾರೆ. ಆದರೆ ಇಂದು ಬೆಳಗ್ಗೆ ಹತ್ತು ಗಂಟೆ ಸುಮಾರಿಗೆ ಬಾವಿಯಲ್ಲಿ ನೇಣು ಬಿಗಿದುಕೂಂಡ ಸ್ಥಿತಿಯಲ್ಲಿ ಯುವತಿಯ ಶವ ಕಂಡ ಮಾಲೀಕ ಸಾಗರಪೇಟೆ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ಸಾಗರಪೇಟೆ ಪೊಲೀಸ್ ಹಾಗೂ ಸಾಗರ ಡಿವೈಎಸ್ಪಿ ಜೆ.ರಘು ಆಗಮಿಸಿ ಪ್ರಕರಣ ದಾಖಲು ಮಾಡಿಕೊಂಡು, ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಸಾಗರ ಉಪವಿಭಾಗಿಯ ಆಸ್ಪತ್ರೆಗೆ ಕಳುಹಿಸಿಕೊಡಲಾಗಿದೆ. ಯುವತಿಯ ಸಾವಿನ ಹಿಂದೆ ಅನುಮಾನದ ಹುತ್ತ ಹುಟ್ಟಿಕೊಂಡಿದ್ದು ಪೊಲೀಸರ ತನಿಖೆಯ ನಂತರ ಸಾವಿನ ಸತ್ಯಾಂಶ ಹೊರಬರಬೇಕಾಗಿದೆ.

Comments

Leave a Reply

Your email address will not be published. Required fields are marked *