3.5 ಕೋಟಿ ವಿಮೆ ಹಣಕ್ಕಾಗಿ ಪತಿಯನ್ನೇ ಕೊಂದ ಪತ್ನಿ

– ಸಂಬಂಧಿ ಜೊತೆ ಸೇರಿ ಗಂಡನ ಕೊಲೆಗೆ ಸ್ಕೆಚ್
– ಬೆಂಕಿ ಹಚ್ಚಿ ಕೊಂದ್ಳು

ಚೆನ್ನೈ: 62 ವರ್ಷದ ಮಹಿಳೆಯೊಬ್ಬಳು 3.5 ಕೋಟಿ ರೂ. ವಿಮೆ ಹಣಕ್ಕಾಗಿ ಸಂಬಂಧಿಕನ ಜೊತೆ ಸೇರಿ ಪತಿಯನ್ನೇ ಕೊಂದಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ.

ಮೃತಪಟ್ಟ ವ್ಯಕ್ತಿಯನ್ನು ಕೆ. ರಂಗರಾಜು ಎಂದು ಗುರುತಿಸಲಾಗಿದ್ದು, ಈತ ಈರೋಡ್ ಜಿಲ್ಲೆಯ ತುಡುಪತಿಯ ನಿವಾಸಿಯಾಗಿದ್ದಾನೆ. ಮೃತ ವ್ಯಕ್ತಿ ವಿದ್ಯುತ್ ಮಗ್ಗದ ಘಟಕ ಹೊಂದಿದ್ದು, ಮಾರ್ಚ್ 15 ರಂದು ಅಪಘಾತದಲ್ಲಿ ಗಾಯಗೊಂಡರು. ಹಾಗಾಗಿ ರಂಗರಾಜುನನ್ನು ಕೊಯಮತ್ತೂರಿನ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದೊಯ್ಯಲಾಗಿತ್ತು. ಬಳಿಕ ಗುರುವಾರ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಯಿತು. ಈ ವೇಳೆ ಪತ್ನಿ ಆರ್. ಜ್ಯೋತಿ ಮಣಿ ಹಾಗೂ ಸಂಬಂಧಿ ರಾಜಾ ರಂಗರಾಜುರನ್ನು ವ್ಯಾನ್‍ನಲ್ಲಿ ಕರೆದೊಯಿದ್ದಾರೆ.

ರಾತ್ರಿ ಸುಮಾರು 11.30ಕ್ಕೆ ಪೆರುಮನಲ್ಲೂರು ಬಳಿಯ ವಲಸುಪಾಲಯಂನಲ್ಲಿ ವಾಹನವನ್ನು ನಿಲ್ಲಿಸಿ ರಾಜಾ ಹಾಗೂ ಜ್ಯೋತಿಮಣಿ ವಾಹನದಿಂದ ಕೆಳಗೆ ಇಳಿದು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ರಂಗರಾಜ್‍ರನ್ನು ಜೀವಂತವಾಗಿ ಸುಟ್ಟಿದ್ದಾರೆ. ಶುಕ್ರವಾರ ಬೆಳಗ್ಗೆ ರಾಜಾ ಸಾವಿನ ಕುರಿತಂತೆ ತಿರುಪುರ ಗ್ರಾಮೀಣ ಪೊಲೀಸರಿಗೆ ಅಪಘಾತ ನಡೆದಿರುವುದಾಗಿ ಮಾಹಿತಿ ನೀಡಿದ್ದಾನೆ.

ಈ ಬಗ್ಗೆ ಅನುಮಾನಗೊಂಡ ಪೊಲೀಸರು, ತನಿಖೆ ನಡೆಸಲು ಆರಂಭಿಸಿದಾಗ ಪೆಟ್ರೋಲ್ ಬಂಕ್‍ನಲ್ಲಿ ಆರೋಪಿ ರಾಜಾ ಪೆಟ್ರೋಲ್ ಖರೀದಿಸಿರುವ ದೃಶ್ಯ ಸೆರೆಯಾಗಿದೆ. ಬಳಿಕ ಪೊಲೀಸರು ವಿಚಾರಣೆ ನಡೆಸಿದಾಗ ಆರೋಪಿ ರಾಜಾ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ. ಈ ವೇಳೆ ರಂಗರಾಜು 1.5 ಕೋಟಿ ಸಾಲ ಮಾಡಿದ್ದು, ಜ್ಯೋತಿಮಣಿಗೆ ಹಣಕ್ಕಾಗಿ ಪೀಡಿಸುತ್ತಿದ್ದನು. ರಂಗರಾಜು ಹೆಸರಿನಲ್ಲಿ 3.5 ಕೋಟಿ ವಿಮೆ ಹಣವಿದ್ದರಿಂದ ಜ್ಯೋತಿ ಮಣಿ ಹಾಗೂ ನಾನು ಸಂಚು ರೂಪಿಸಿ ಕೊಲೆ ಮಾಡಲು ನಿರ್ಧರಿಸೆದೇವು. ಅಲ್ಲದೆ ಜ್ಯೋತಿ ಮಣಿ ಕೊಲೆ ಮಾಡಲು ನನಗೆ ಮುಂಗಡವಾಗಿ 50,000 ರೂ ಹಣ ನೀಡಿದ್ದು, ಕೊಲೆ ನಂತರ 1 ಲಕ್ಷ ರೂ. ಹಣ ನೀಡುವುದಾಗಿ ತಿಳಿಸಿದ್ದಳು ಎಂದು ಹೇಳಿದ್ದಾನೆ.

ಸದ್ಯ ಪೊಲೀಸರು ಆರೋಪಿಗಳ ವಿರುದ್ಧ ಕೊಲೆ ಪ್ರಕರಣ ದಾಖಲಿಸಿ ಬಂಧಿಸಿದ್ದಾರೆ.

Comments

Leave a Reply

Your email address will not be published. Required fields are marked *