ನೆರೆಯಲ್ಲಿ ನೀರುಪಾಲಾಗಿದ್ದ ಮೂವರು ಸಿಬ್ಬಂದಿಯ ರಕ್ಷಣೆ

ಕೊಪ್ಪಳ: ಪ್ರವಾಹಕ್ಕೀಡಾದ ಐವರು ಸಿಬ್ಬಂದಿಯಲ್ಲಿ ಮೂವರನ್ನು ರಕ್ಷಣೆ ಮಾಡಲಾಗಿದೆ. ಇನ್ನಿಬ್ಬರಿಗಾಗಿ ತೀವ್ರ ಹುಡುಕಾಟ ನಡೆಸಲಾಗುತ್ತಿದೆ.

ಪ್ರವಾಹಕ್ಕೀಡಾದ ಸಂತ್ರಸ್ತರನ್ನು ರಕ್ಷಣೆ ಮಾಡುವ ಸಂದರ್ಭದಲ್ಲಿ ನೀರಿನ ಸೆಳೆತಕ್ಕೆ ಬೋಡ್ ಸಮೇತ ಐವರು ರಕ್ಷಣಾ ಸಿಬ್ಬಂದಿ ಕೊಚ್ಚಿ ಹೋಗಿದ್ದರು. ಸಿಬ್ಬಂದಿ ಲೈಫ್ ಜಾಕೆಟ್ ಹಾಕಿದ್ದರಿಂದ ಸೇಫ್ ಆಗಿದ್ದು, ಸದ್ಯ ಮೂವರನ್ನು ರಕ್ಷಣೆ ಮಾಡಲಾಗಿದೆ.

ದುರ್ಘಟನೆ ನಡೆದ ಕೂಡಲೇ ಸ್ಥಳೀಯರು, ಇತರ ಸಿಬ್ಬಂದಿ ಹಾಗೂ ಹೆಲಿಕಾಪ್ಟರ್ ಕೂಡಲೇ ಜೀವ ಉಳಿಸಿದವರಿಗಾಗಿ ಹುಡುಕಾಟ ನಡೆಸಿತ್ತು. ಸದ್ಯ ಮೂವರು ಬಚಾವ್ ಆಗಿದ್ದು, ಇನ್ನಿಬ್ಬರಿಗಾಗಿ ಶೋಧ ಮುಂದುವರಿದಿದೆ.

ವಿರುಪಾಪುರ ಗಡ್ಡಿಯಲ್ಲಿ ಸಿಲುಕಿದ್ದ ವಿದೇಶಿಗರು ಸೇರಿ ಸುಮಾರು 300 ಮಂದಿಯನ್ನು ರಕ್ಷಣೆ ಮಾಡಲು ಸಿಬ್ಬಂದಿ ತೆರಳಿದ್ದರು. ಆದರೆ ತುಂಗಭದ್ರಾ ನದಿ ನೀರಿನ ರಭಸಕ್ಕೆ ಬೋಟ್ ಮುಗುಚಿ ಬಿದ್ದ ಹಿನ್ನಲೆಯಲ್ಲಿ ಎನ್‍ಡಿಆರ್‍ಎಫ್ ತಂಡದ ಇಬ್ಬರು ಹಾಗೂ ಬೋಟ್ ನಲ್ಲಿದ್ದ ಅಗ್ನಿ ಶಾಮಕ ದಳದ ಮೂವರು ಸಿಬ್ಬಂದಿ ನೀರುಪಾಲಾಗಿದ್ದರು.

Comments

Leave a Reply

Your email address will not be published. Required fields are marked *