ಹೊಳೆನರಸೀಪುರದಲ್ಲಿ ಅಕ್ರಮ ಮತದಾನ- ಮೂವರು ಸಿಬ್ಬಂದಿ ಅಮಾನತು

ಹಾಸನ: ಅಕ್ರಮ ಮತದಾನದ ತನಿಖೆಯ ಪರಿಣಾಮ ಇದೀಗ ಹಾಸನದಲ್ಲಿ ಮೂವರು ಸಿಬ್ಬಂದಿ ಅಮಾನತುಗೊಂಡಿದ್ದಾರೆ.

ಮತಗಟ್ಟೆ ಅಧಿಕಾರಿಯಾಗಿದ್ದ ಯೋಗೇಶ್, ರಾಮಚಂದ್ರ ರಾವ್ ಹಾಗೂ ದಿನೇಶ್ ಅಮಾನತುಗೊಂಡ ಸಿಬ್ಬಂದಿ. ಇವರನ್ನು ಜಿಲ್ಲಾ ಚುನಾವಣಾ ಅಧಿಕಾರಿಗಳು ಅಮಾನತುಗೊಳಿಸಿದ್ದಾರೆ.

ಏಪ್ರಿಲ್ 18 ರಂದು ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕಿನ ಪಡುವಲಹಿಪ್ಪೆ ಗ್ರಾಮದಲ್ಲಿ ಮಾಜಿ ಪ್ರಧಾನಿ ದೇವೇಗೌಡರು, ಮೈತ್ರಿ ಅಭ್ಯರ್ಥಿ ಪ್ರಜ್ವಲ್, ಸಚಿವ ರೇವಣ್ಣ ಮತದಾನ ಮಾಡಿದ ನಂತರ ಯುವಕರು ಅಕ್ರಮ ಮತದಾನ ಮಾಡಿದ್ದರು ಎಂದು ಆರೋಪಿಸಲಾಗಿತ್ತು. ಈ ಬಗ್ಗೆ ಬಿಜೆಪಿ ಬೂತ್ ಏಜೆಂಟ್ ರಾಜು ಹಾಗೂ ಮಾಯಣ್ಣ ಅವರು ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿಯವರಿಗೆ ದೂರು ನೀಡಿದ್ದರು.

ದೂರು ಸ್ವೀಕರಿಸಿದ್ದ ಜಿಲ್ಲಾಧಿಕಾರಿ ಭಾನುವಾರ ಸಿಸಿಟಿವಿ ದೃಶ್ಯವನ್ನು ಪರಿಶೀಲನೆ ಮಾಡಿದ್ದರು. ಈ ವೇಳೆ ಅಕ್ರಮ ಮತದಾನ ನಡೆದಿರುವುದು ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಮೂವರು ಸಿಬ್ಬಂದಿಯನ್ನು ಅಮಾನತು ಮಾಡಿ ಅದೇಶ ಹೊರಡಿಸಿದ್ದಾರೆ.

Comments

Leave a Reply

Your email address will not be published. Required fields are marked *