ಕೆಲಸದ ಆಮಿಷವೊಡ್ಡಿ ಮೂವರು ಪಾದ್ರಿಗಳಿಂದ ಅಪ್ರಾಪ್ತೆ ಮೇಲೆ ಅತ್ಯಾಚಾರ!

ಮೈಸೂರು: ಮೂವರು ಪಾದ್ರಿಗಳು ಸರ್ಕಾರಿ ಕೆಲಸ ಕೊಡಿಸುವ ಆಮಿಷವೊಡ್ಡಿ ಅಪ್ರಾಪ್ತ ಬಾಲಕಿಯನ್ನು ಮಂಗಳೂರಿಗೆ ಕರೆದೊಯ್ದು ಅತ್ಯಾಚಾರ ಎಸೆಗಿರುವ ಅಮಾನವೀಯ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಮೈಸೂರಿನ ಎನ್.ಆರ್ ಮೊಹಲ್ಲಾದ ಬಾಲಕಿ ಮೇಲೆ ಪಾದ್ರಿಗಳು ಅತ್ಯಾಚಾರ ನಡೆಸಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿವೆ. ಬಾಲಕಿ ತಾಯಿಗೆ ಮನೆ ಕಟ್ಟಲು 1 ಲಕ್ಷ ಕೊಡುವುದಾಗಿ ಆಮಿಷವೊಡ್ಡಿ, ಬಾಲಕಿಗೆ ಕೆಲಸ ಕೊಡಿಸುವುದಾಗಿ ನಂಬಿಸಿ ಆಕೆಯನ್ನು ಪಾದ್ರಿ ಸೆಬಾಸ್ಟಿಯನ್ ಮಂಗಳೂರಿಗೆ ಕರೆದೊಯ್ದಿದ್ದಾನೆ. ಮೋಸದಿಂದ ಬಾಲಕಿಯನ್ನು ಮಂಗಳೂರಿಗೆ ಕರೆದೊಯ್ದ ಸೆಬಾಸ್ಟಿಯನ್ ಜೊತೆ ಇನ್ನಿಬ್ಬರು ಪಾದ್ರಿಗಳು ಸೇರಿ ಅತ್ಯಾಚಾರ ಮಾಡಿದ್ದಾರೆ.

ಪಾಪಿಗಳಿಂದ ಹೇಗೋ ತಪ್ಪಿಸಿಕೊಂಡು ಬಾಲಕಿ ಮೈಸೂರಿಗೆ ಬಂದಿದ್ದಾಳೆ. ಬಳಿಕ ಸ್ವಸಹಾಯ ಸಂಘದ ನೆರವಿನಿಂದ ಬೆಂಗಳೂರಿನ ಹೈಕೋರ್ಟ್‍ಗೆ ಬಾಲಕಿಯ ಪೋಷಕರು ದೂರು ಸಲ್ಲಿಸಿದ್ದಾರೆ. ಬಳಿಕ ಆರೋಪಿಗಳ ಮೇಲೆ ಕಾನೂನು ಕ್ರಮ ಕೈಗೊಳ್ಳುವಂತೆ ಮೈಸೂರು ಕಮೀಷನರ್ ಗೆ ಹೈಕೋರ್ಟ್ ಸೂಚನೆ ನೀಡಿದೆ. ಘಟನೆ ಬೆಳಕಿಗೆ ಬರುತ್ತಿದಂತೆ ಆರೋಪಿಗಳು ನಾಪತ್ತೆಯಾಗಿದ್ದಾರೆ.

ಸದ್ಯ ಮೈಸೂರಿನ ಎನ್.ಆರ್ ಪೊಲೀಸ್ ಠಾಣೆಯಲ್ಲಿ ಸೆಬಾಸ್ಟಿಯನ್ ಹಾಗೂ ಇತರೆ ಆರೋಪಿಗಳ ಮೇಲೆ ಪೋಸ್ಕೋ ಕಾಯ್ದೆ ಅಡಿಯಲ್ಲಿ ಎಫ್.ಐ.ಆರ್ ದಾಖಲಾಗಿದ್ದು, ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv 

Comments

Leave a Reply

Your email address will not be published. Required fields are marked *