ಭೀಕರ ರಸ್ತೆ ಅಪಘಾತ ಮೂರು ಜನ ವಿದ್ಯಾರ್ಥಿಗಳು ಸಾವು

ಬೆಳಗಾವಿ: ಭೂತನಾಥ ದೇವಸ್ಥಾನಕ್ಕೆ ಹೋಗಿ ವಾಪಸ್ ಬರುವಾಗ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೂರು ಜನ ವಿದ್ಯಾರ್ಥಿಗಳು ಮೃತಪಟ್ಟ ಘಟನೆ ಬೆಳಗಾವಿ ತಾಲೂಕಿನ ದೇಸೂರ ಗ್ರಾಮದ ಬಳಿ ನಡೆದಿದೆ.

ಅಥರ್ವ(16), ಅಮನ್ ಕಬ್ಲೇಶ್ವರಿ(17) ಹಾಗೂ ಹರ್ಷ(17) ಮೃತ ವಿದ್ಯಾರ್ಥಿಗಳು. ದೇವರ ದರ್ಶನ ಮುಗಿಸಿ ಬೈಕಿನಲ್ಲಿ ವಾಪಸ್ ಬರುತ್ತಿದ್ದ ವೇಳೆ ಕಾರ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿ ಮೂರು ಜನ ಮೃಪಟ್ಟಿದ್ದಾರೆ. ಇನ್ನೂ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Comments

Leave a Reply

Your email address will not be published. Required fields are marked *