5 ಲಕ್ಷ ಮೌಲ್ಯದ ಮಾದಕ ದ್ರವ್ಯ ಅಫೀಮು ವಶ

ವಿಜಯಪುರ: ಜಿಲ್ಲೆಯ ಅಬಕಾರಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಐದು ಲಕ್ಷ ಮೌಲ್ಯದ ಮಾದಕ ದ್ರವ್ಯ ಅಫೀಮನ್ನ ವಶಕ್ಕೆ ಪಡೆದಿದ್ದಾರೆ.

ಕರ್ನಾಟಕ-ಮಹಾರಾಷ್ಟ್ರದ ವಿಜಯಪುರ ಜಿಲ್ಲೆಯ ಗಡಿ ಶಿರಾಡೋಣ ಗ್ರಾಮದ ಹತ್ತಿರ ರಾಜಸ್ಥಾನಕ್ಕೆ ಸೇರಿದ ಲಾರಿಯಲ್ಲಿ ಸಾಗಿಸಲಾಗುತ್ತಿದ್ದ ಅಫೀಮನ್ನ ವಶಕ್ಕೆ ಪಡೆಯಲಾಗಿದೆ. ಇನ್ನೂ 12.50 ಕೆಜೆ ಅಫೀಮು ಪುಡಿ ಸಿಕ್ಕಿದ್ದು, ರಾಜಸ್ಥಾನ ಮೂಲದ ಲಾರಿ ಚಾಲಕ ಸತೀಶ್ ಚೌಧರಿಯನ್ನ ಬಂಧಿಸಲಾಗಿದೆ. ಜೊತೆಗೆ ಐದು ಲಕ್ಷ ಮೌಲ್ಯದ ಅಫೀಮು ಮತ್ತು 25 ಲಕ್ಷ ಮೌಲ್ಯದ ಲಾರಿಯನ್ನು ವಶಕ್ಕೆ ಪಡೆಯಲಾಗಿದೆ.

ವಿಜಯಪುರದ ಮೂಲಕ ಬೆಂಗಳೂರಿಗೆ ಅಫೀಮನ್ನು ಸಾಗಿಸುತ್ತಿರುವ ಬಗ್ಗೆ ಮಾಹಿತಿ ಸಿಕ್ಕಿದೆ. ಹೀಗಾಗಿ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ರಾಜಸ್ಥಾನ-ಮಧ್ಯಪ್ರದೇಶದ ಅಧಿಕಾರಿಗಳಿಗೆ ಈ ಬಗ್ಗೆ ಪತ್ರ ಬರೆಯಲಾಗುವುದು. ಅಲ್ಲಿಯೂ ತನಿಖೆ ನಡೆಸುವಂತೆ ಕೋರಲಾಗುವುದು. ಜೊತೆಗೆ ಬೆಂಗಳೂರಿನಲ್ಲಿಯೂ ತನಿಖೆ ನಡೆಸಲು ಶಿಫಾರಸು ಮಾಡಲಾಗುವುದು ಎಂದು ವಿಜಯಪುರ ಅಬಕಾರಿ ಡಿಸಿ ಕೆ.ಅರುಣ್‍ಕುಮಾರ್ ಹೇಳಿದ್ದಾರೆ.

Comments

Leave a Reply

Your email address will not be published. Required fields are marked *