ಚಿಕ್ಕಬಳ್ಳಾಪುರ: ಆಕಸ್ಮಿಕವಾಗಿ ಮನೆಯೊಂದಕ್ಕೆ ಕಿಡಿ ತಗುಲಿ ಬೆಂಕಿ ಕಾಣಿಸಿಕೊಂಡಿದ್ದು, ಅಲ್ಲಿಯೇ ಇದ್ದ ಎಲ್ಪಿಜಿ ಸಿಲಿಂಡರ್ ಸೋರಿಕೆಯಾಗಿ ಆಕ್ಕ-ಪಕ್ಕದ ಮನೆಗಳು ಸುಟ್ಟು ಕರಕಲಾದ ಘಟನೆ ಗೌರಿಬಿದನೂರು ತಾಲೂಕಿನ ಮಣಿವಾಲ ಗ್ರಾಮದಲ್ಲಿ ನಡೆದಿದೆ.
ಮಣಿವಾಲ ಗ್ರಾಮದ ಆನಂದ್ ಎಂಬವರ ಮನೆಯಲ್ಲಿ ಮೊದಲು ಬೆಂಕಿ ಹೊತ್ತಿಕೊಂಡಿತ್ತು. ಬಿಸಿ ಹೆಚ್ಚಾಗಿದ್ದರಿಂದ ಎಲ್ಪಿಜಿ ಸಿಲಿಂಡರ್ ಸೋರಿಕೆಯಾಗಿದ್ದು, ಬೆಂಕಿಯ ವ್ಯಾಪ್ತಿ ಹೆಚ್ಚಾಗಿದೆ. ಇದರಿಂದಾಗಿ ಒಂದೇ ಸಾಲಿನಲ್ಲಿದ್ದ ಆನಂದ್ ಅವರ ಸಹೋದರರಾದ ಆದಿನಾರಾಣಪ್ಪ, ಶ್ರೀನಿವಾಸ್, ನಾರಾಯಣಸ್ವಾಮಿ ಹಾಗೂ ವೆಂಕಟಲಕ್ಷಮ್ಮ ಮನೆಗಳು ಬೆಂಕಿಗೆ ಆಹುತಿಯಾಗಿವೆ. ಮನೆಯ ಮೇಲ್ಛಾವಣಿ ಸೇರಿದಂತೆ ಮನೆಯೊಳಗಿದ್ದ ದಿನಬಳಕೆ ಹಾಗೂ ಗೃಹಪಯೋಗಿ ವಸ್ತುಗಳು ಸುಟ್ಟು ಕರಕಲಾಗಿವೆ.

ಮಾಹಿತಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳ ಸ್ಥಳಕ್ಕೆ ಬಂದು ಬೆಂಕಿಯನ್ನು ನಂದಿಸಿದ್ದಾರೆ. ಈ ಕುರಿತು ಗೌರಿಬಿದನೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Leave a Reply