ನದಿಗೆ ಬಿದ್ದ ಬಸ್ – 6 ಜನರ ಸಾವು, 30 ಪ್ರಯಾಣಿಕರಿಗೆ ಗಾಯ

ಹೈದರಾಬಾದ್: ಖಾಸಗಿ ಬಸ್‍ವೊಂದು ನದಿಗೆ ಬಿದ್ದ ಪರಿಣಾಮ 6 ಮಂದಿ ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ ವಿಜಯವಾಡ ಬಳಿ ನಡೆದಿದೆ.

ಇಂದು ಬೆಳಿಗ್ಗೆ ಭುವನೇಶ್ವರದಿಂದ ಹೈದರಾಬಾದ್‍ಗೆ ತೆರಳುತ್ತಿದ್ದ ಬಸ್ ವಿಜಯವಾಡಾ ಬಳಿ ನದಿಗೆ ಉರುಳಿ ಬಿದ್ದಿದೆ. ಘಟನೆಯಲ್ಲಿ 6 ಮಂದಿ ಸಾವನ್ನಪ್ಪಿದ್ದು ಸುಮಾರು 30 ಜನ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ನಂದಿಗಾಮ ಸರ್ಕಾರಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದ್ದು, 10 ಜನರ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ.

ಒಡಿಶಾದಿಂದ ತೆಲಂಗಾಣಕ್ಕೆ ಸುಮಾರು 1 ಸಾವಿರ ಕಿಮೀ ಕ್ರಮಿಸಬೇಕಿದ್ದ ಬಸ್ಸನ್ನು ವಿಜಯವಾಡ ಬಳಿ ನಿಲ್ಲಿಸಿ ಬೇರೊಬ್ಬ ಚಾಲಕ ಬಸ್ ಹತ್ತಿದ್ದರು. ಆದ್ರೆ ಬೆಳಿಗ್ಗೆ 5.30ರ ವೇಳೆಯಲ್ಲಿ ಮುಲ್ಲಪಾಡು ಬಳಿ ಸೇತುವೆಯ ಡಿವೈಡರ್‍ಗೆ ಬಸ್ ಡಿಕ್ಕಿ ಹೊಡೆದು ಮುಂದೆ ಹೋಗಿದ್ದು ಎರಡು ಪಥದ ಮಧ್ಯೆ ಇದ್ದ ಸಂದಿಯಲ್ಲಿ ನದಿಗೆ ಉರುಳಿ ಬಿದ್ದಿದೆ.

ಗ್ಯಾಸ್ ಕಟ್ಟರ್‍ಗಳನ್ನು ಬಳಸಿ ಬಸ್‍ನಲ್ಲಿದ್ದ ಪ್ರಯಾಣಿಕರನ್ನ ರಕ್ಷಣೆ ಮಾಡಲಾಗಿದೆ. ಚಾಲಕ ನಿದ್ದೆಯ ಮಂಪರಿನಲ್ಲಿದ್ದು, ಆತನ ಅಜಾಗರೂಕತೆಯಿಂದಲೇ ಈ ಅಪಘಾತ ಸಂಭವಿಸಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

Comments

Leave a Reply

Your email address will not be published. Required fields are marked *