ರಾಜ್ಯದಲ್ಲಿ ಮತ್ತೊಂದು ಕೊಳವೆ ಬಾವಿ ದುರಂತ : 6 ವರ್ಷದ ಪುಟಾಣಿಯ ರಕ್ಷಣೆಗೆ ಹರಸಾಹಸ

ಬೆಳಗಾವಿ: 10 ದಿನಗಳ ಅಂತರದಲ್ಲಿ ರಾಜ್ಯದಲ್ಲಿ ಮತ್ತೊಂದು ಕೊಳವೆ ಬಾವಿ ದುರಂತ ಸಂಭವಿಸಿದೆ. ಅಥಣಿ ತಾಲೂಕಿನ ಝಂಜರವಾಡದಲ್ಲಿ ತೆರೆದ ಬೋರ್‍ವೆಲ್‍ಗೆ 6 ವರ್ಷದ ಬಾಲಕಿ ಬಿದ್ದಿದ್ದಾಳೆ.

ಕಾವೇರಿ ಮಾದರ ಝಂಜರವಾಡ ಗ್ರಾಮದ ತೋಟದ ಮನೆಯಲ್ಲಿನ ತೆರೆದ ಕೊಳವೆ ಬಾವಿಗೆ ಬಿದ್ದ ಬಾಲಕಿ. ಅಗ್ನಿ ಶಾಮಕದಳದ ಸಿಬ್ಬಂದಿ ಹಾಗೂ ಸ್ಥಳೀಯರಿಂದ ಮಗು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.

ರೈತ ಶಂಕರಪ್ಪ ಹಿಪ್ಪರಗಿ ಅವರು 400 ಅಡಿ ಕೊಳವೆ ಬಾವಿ ಕೊರೆಸಿದ್ದಾಗ ಫೇಲ್ ಆಗಿತ್ತು. ಇವರು ಕೊಳವೆ ಬಾವಿ ಮುಚ್ಚದೇ ಹಾಗೇ ಬಿಟ್ಟಿದ್ದರು. ಇಂದು ಸಂಜೆ ಸುಮಾರು 5 ಗಂಟೆಗೆ ಬಾಲಕಿ `ಕಾವೇರಿ ಮಾದರ’ ಆಟವಾಡುತ್ತಾ ಹೋಗಿ ಬಿದ್ದಿದ್ದಾಳೆ. ಸುಮಾರು 50 ಅಡಿ ಆಳದಲ್ಲಿ ಬಾಲಕಿ ಸಿಲುಕಿದ್ದಾಳೆ ಎನ್ನುವ ಮಾಹಿತಿ ಈಗ ಸಿಕ್ಕಿದೆ.

Comments

Leave a Reply

Your email address will not be published. Required fields are marked *