ಮದ್ಯದ ನಶೆಯಲ್ಲಿ ವೃದ್ಧೆಯ ಮೇಲೆ ಅತ್ಯಾಚಾರಗೈದು ಕೊಲೆಗೈದ ಕಾಮುಕರು ಅಂದರ್

ಕಲಬುರಗಿ: ಚಿತ್ತಾಪುರ ತಾಲೂಕಿನ ದಂಡೋತಿ ಗ್ರಾಮದಲ್ಲಿ ವೃದ್ಧೆಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

60 ವರ್ಷದ ಶುಕರಾ ಬಿ ಮೇಲೆ ಅತ್ಯಾಚಾರ ಎಸಗಿ ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಸೇಡಂ ತಾಲೂಕಿನ ಸೂರವಾರ ಗ್ರಾಮದ ಮಲ್ಲಿಕಾರ್ಜುನ್(26), ಚಿತ್ತಾಪುರ ತಾಲೂಕಿನ ದಂಡೋತಿ ಗ್ರಾಮದ ನಿವಾಸಿ ಗಜೇಂದ್ರ(25) ಪೊಲೀಸರು ಬಂಧಿಸಿದ್ದಾರೆ.

ಏನಿದು ಪ್ರಕರಣ?
ಆರೋಪಿ ಮಲ್ಲಿಕಾರ್ಜುನ ಈ ಮೊದಲೇ ಕಳ್ಳತನ ಪ್ರಕರಣದಲ್ಲಿ ಜೈಲಿಗೆ ಹೋಗಿದ್ದ. ಜುಲೈ 16 ರಂದು ಬಿಡುಗಡೆಯಾದ ಬಳಿಕ ಸಂಬಂಧಿ ಗಜೇಂದ್ರನ ಊರಿಗೆ ತೆರಳಿದ್ದ. ಜುಲೈ 26 ಗುರುವಾರ ಇಬ್ಬರು ದಂಡೋತಿ ಗ್ರಾಮದ ಹೊರವಲಯದಲ್ಲಿ ಕೂತು ಮದ್ಯಪಾನ ಮಾಡಿದ್ದಾರೆ. ಸಂಜೆ ಜಮೀನಿನ ಕೆಲಸ ಮುಗಿಸಿಕೊಂಡು ರಾತ್ರಿ ಮನೆಗೆ ಬರುವಾಗ ದಾರಿಯಲ್ಲಿ ಸಿಕ್ಕ ವೃದ್ಧೆಯ ಮೇಲೆ ಜಮೀನಿನಲ್ಲಿ ಇಬ್ಬರು ಸೇರಿ ಅತ್ಯಾಚಾರ ಎಸಗಿದ್ದಾರೆ. ಬಳಿಕ ಕಲ್ಲಿನಿಂದ ಜಜ್ಜೆ ಕೊಲೆ ಮಾಡಿ ಪರಾರಿಯಾಗಿದ್ದಾರೆ.

ಬೆಳಕಿಗೆ ಬಂದಿದ್ದು ಹೇಗೆ?
ಮುಂಜಾನೆ ಕೆಲಸಕ್ಕೆ ಹೋದ ಶುಕರಾರವರು ರಾತ್ರಿಯಾದರೂ ಮನೆಗೆ ಬಾರದೆ ಹಿನ್ನೆಲೆಯಲ್ಲಿ ಮನೆಯವರು ಹುಡುಕಾಟ ನಡೆಸಿದ್ದಾರೆ. ಈ ವೇಳೆ ತಡರಾತ್ರಿ 11ರ ಸಮಯದಲ್ಲಿ ಅವರ ಮೃತದೇಹ ಜಮೀನಿನಲ್ಲಿ ಪತ್ತೆಯಾಗಿದೆ. ಮೃತದೇಹ ಪತ್ತೆಯಾದ ಹಿನ್ನೆಲೆಯಲ್ಲಿ ವೃದ್ಧೆಯ ಕುಟುಂಬಸ್ಥರು ಮಾಡ್‍ಬೂಳ್ ಠಾಣೆಯಲ್ಲಿ ದೂರು ನೀಡಿದ್ದರು.

ಆರೋಪಿಗಳು ಸಿಕ್ಕಿಬಿದ್ದಿದ್ದು ಹೇಗೆ?
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ಇಳಿದ ಪೊಲೀಸರು ಗ್ರಾಮಸ್ಥರನ್ನು ವಿಚಾರಣೆ ನಡೆಸಿದಾಗ ಇಬ್ಬರು ವ್ಯಕ್ತಿಗಳು ಮದ್ಯಪಾನ ಸೇವಿಸಿ ಕುಳಿತುಕೊಂಡಿದ್ದ ವಿಚಾರವನ್ನು ತಿಳಿಸಿದ್ದಾರೆ. ಈ ಆಧಾರದ ಹಿನ್ನೆಲೆಯಲ್ಲಿ ಒರ್ವ ಗಜೇಂದ್ರನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ನಾವೇ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದಾಗಿ ಒಪ್ಪಿಕೊಂಡಿದ್ದಾನೆ. ಈ ಮಾಹಿತಿಯ ಆಧಾರದಲ್ಲಿ ಮಲ್ಲಿಕಾರ್ಜುನ್ ನನ್ನು ಬಂಧಿಸಿದ್ದಾರೆ.

Comments

Leave a Reply

Your email address will not be published. Required fields are marked *