70 ನೇ ವಸಂತಕ್ಕೆ ಕಾಲಿಟ್ಟ ವಿ.ಸೋಮಣ್ಣ-ಗುಡಿಸಲು ಮುಕ್ತ ರಾಜ್ಯ ಮಾಡೋದೆ ನನ್ನ ಗುರಿ

ಬೆಂಗಳೂರು: ರಾಜ್ಯ ಬಿಜೆಪಿ ಹಿರಿಯ ನಾಯಕ ವಸತಿ ಸಚಿವ ವಿ ಸೋಮಣ್ಣ ಅವರು ಇಂದು 70 ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಬೆಂಗಳೂರಿನ ವಿಜಯನಗರದ ಶಾಸಕರ ಕಛೇರಿ ಮುಂಭಾಗದಲ್ಲಿ ಸರಳವಾಗಿ ನೂರಾರು ಕಾರ್ಯಕರ್ತರ ಸಮ್ಮುಖದಲ್ಲಿ ಹುಟ್ಟುಹಬ್ಬ ಆಚರಸಿಕೊಂಡಿದ್ದಾರೆ.  ಇದನ್ನೂ ಓದಿ: ನಾಯಕತ್ವ ಬದಲಾವಣೆ ಚರ್ಚೆ ನಮ್ಮಲ್ಲಿ ಆಗಿರುವುದು ನಿಜ: ಈಶ್ವರಪ್ಪ

ಬಳಿಕ ಮಾತನಾಡಿದ ಅವರು, ಈ ಬಾರಿ ಹುಟ್ಟು ಹಬ್ಬ ಸಂಭ್ರಮ ಇಲ್ಲ. ಸಿದ್ದಗಂಗಾ ಶ್ರೀಗಳಾದ ಶಿವಕುಮಾರ್ ಸ್ವಾಮೀಜಿಗಳು ಮತ್ತು ಬಾಲಗಂಗಾಧರ ನಾಥ ಸ್ವಾಮಿಜಿ ಲಿಂಗೈಕ್ಯರಾದ ಮೇಲೆ ಆಚರಣೆ ನಿಲ್ಲಿಸಿದ್ದೇನೆ. ನಿನ್ನೆ ರಾತ್ರಿ ಸ್ಥಳೀಯ ಮುಖಂಡರು ಸಣ್ಣದೊಂದು ಪ್ರಚಾರ ಕೊಟ್ಟಿದ್ದಾರೆ. ಕಳೆದ 25 ವರ್ಷಗಳಿಂದ ಸಿದ್ದಗಂಗೆ ಶ್ರೀಗಳು ನನ್ನ ಹುಟ್ಟುಹಬ್ಬಕ್ಕೆ ಬರ್ತಾ ಇದ್ದರು. ಅವರು ಲಿಂಗೈಕ್ಯರಾದ ಮೇಲೆ ಅವರು ಇಲ್ಲ ಅನ್ನೊ ನೋವು ಕಾಡಬಾರದೆಂದು ಹುಟ್ಟುಹಬ್ಬ ಆಚರಣೆ ಮಾಡೋದು ನಿಲ್ಲಿಸಿದ್ದೇನೆ ಎಂದಿದ್ದಾರೆ. ಇದನ್ನೂ ಓದಿ: ನಾನು ಮಂತ್ರಿಯಾಗಬೇಕೆಂದು ಬಿಜೆಪಿಗೆ ಬಂದವನಲ್ಲ: ಮಹೇಶ್ ಕುಮಟಳ್ಳಿ

ನನ್ನ ಮೇಲಿನ ಪ್ರೀತಿ ವಿಶ್ವಾಸದಿಂದ ಜನ ಬರುತ್ತಾರೆ. ಇವತ್ತು ಬೇಡ ಅಂತ ಹೇಳಿದ್ದರು ಜನ ಬರುತ್ತಿದ್ದಾರೆ. ಕೊರೊನಾದಿಂದ ರಾಜ್ಯ ತತ್ತರಿಸಿದೆ. ಸಾಮಾಜಿಕ ಅಂತರದ ಬಗ್ಗೆ ನಾವೇ ಹೇಳ್ತೇವೆ. ಮತ್ತೆ ನಾವೇ ಆ ತಪ್ಪು ಆಗೋದು ಬೇಡ ಅಂತ ಕೆಲವು ವಿಷಯಗಳಿಗೆ ಕಡಿವಾಣ ಹಾಕಿದ್ದೆ. ಆದರೂ ಈ ರೀತಿ ಜನ ಬರ್ತಿದ್ದಾರೆ ಇದು ನನ್ನ ಮನಸ್ಸಿಗೂ ನೋವಾಗಿದೆ .ಮಾಧ್ಯಮಗಳ ಮುಖಾಂತರ ಸಾರ್ವಜನಿಕರನ್ನ ಕ್ಷಮೆ ಕೇಳುತ್ತೇನೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಧಾರಾವಾಹಿ ನಟಿ ಚೈತ್ರಾ ರೈ ಸೀಮಂತ

ನಾಲ್ಕು ದಶಕಗಳು ಜನಪ್ರತಿನಿಧಿಯಾಗಿ ಸೇವೆ ಸಲ್ಲಿಸಿದ್ದೇನೆ, ಇರುವಷ್ಟು ದಿನ ಏನಾದರೂ ಮಾಡುವ ಆಸೆ ಇದೆ. ಗುಡಿಸಲಿನಲ್ಲಿ ವಾಸ ಮಾಡುವವರಿಗೂ ಮನೆ ಕಲ್ಪಿಸಲು ಮುಖ್ಯಮಂತ್ರಿಗಳು ನನಗೊಂದು ಅವಕಾಶ ಕೊಟ್ಟಿದ್ದಾರೆ. ಅದರಂತೆ ನಡೆಯುತ್ತೇನೆ. ಇದರ ಜೊತೆಗೆ ಮತ್ತೆ ರಾಜ್ಯದಲ್ಲಿ ಕೊರೊನಾ ಮೂರನೇ ಅಲೆ ಭೀತಿ ಇದೆ. ಎಲ್ಲರು ಕೊರೊನಾ ನಿಯಮಗಳನ್ನ ಪಾಲಿಸಿ, ಕರ್ತವ್ಯ ನಿರ್ವಹಣೆ ಜೊತೆಗೆ ಸಾಮಾಜಿಕ ಅಂತರ ಪಾಲನೆ ಮಾಡೋಣ ಎಂದು ಕರೆ ನೀಡಿದ್ದಾರೆ.

 

Comments

Leave a Reply

Your email address will not be published. Required fields are marked *