ದೇಶದೆಲ್ಲೆಡೆ 71ನೇ ಸ್ವಾತಂತ್ರ್ಯ ಹಬ್ಬ-ಪ್ರಧಾನಿ ಮೋದಿಯಿಂದ ದೇಶದ ಜನತೆಗೆ ವಿಶ್

ಬೆಂಗಳೂರು: ಇಂದು ದೇಶಾದ್ಯಂತ 71ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲು ದೇಶದ ಜನ ಸಕಲ ಸಿದ್ಧತೆಯಲ್ಲಿ ತೊಡಗಿದ್ದಾರೆ.

ಹಲವೆಡೆ ಮಧ್ಯರಾತ್ರಿಯೇ ಧ್ವಜಾರೋಹಣ ಮಾಡಿ ಸಂಭ್ರಮಿಸಿದ್ರೆ, ದೆಹಲಿಯ ಕೆಂಪುಕೋಟೆಯಲ್ಲಿ ಪ್ರಧಾನಿ ಮೋದಿ ಧ್ವಜಾರೋಹಣ ಮಾಡಲಿದ್ದಾರೆ. ಬಳಿಕ ದೇಶವನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ ಮಾಡಲಿದ್ದಾರೆ.

ದೇಶದ ಪ್ರಮುಖ ನಗರಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದ್ದು ಭಾರಿ ಬಂದೋಬಸ್ತ್ ಮಾಡಲಾಗಿದೆ. ಕೆಂಪುಕೋಟೆಯಲ್ಲಿ ನಡೆಯಲಿರುವ ಸ್ವಾತಂತ್ರ್ಯೋತ್ಸವ ಪಥಸಂಚಲನಕ್ಕಾಗಿ ಅಭೂತಪೂರ್ವ ಭದ್ರತೆ ಒದಗಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಜೊತೆಗೆ ದೇಶ-ವಿದೇಶಗಳ ಗಣ್ಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಉಗ್ರರ ಭೀತಿಗಾಗಿ ಹೆಚ್ಚಿನ ಸಂಖ್ಯೆಯ ಕಮಾಂಡೊಗಳು, ಶಾರ್ಪ್ ಶೂಟರ್ ಗಳನ್ನು ನಿಯೋಜಿಸಲಾಗಿದೆ. ಪಥಸಂಚಲನ ನಡೆಯುವ ಮಾರ್ಗದ ಮೇಲೆ ಹದ್ದಿನ ಕಣ್ಣಿಡಲು ಹೆಲಿಕಾಪ್ಟರ್ ಮತ್ತು ಡ್ರೋಣ್ ಪಹರೆಯನ್ನು ಹಾಕಲಾಗಿದೆ.

Comments

Leave a Reply

Your email address will not be published. Required fields are marked *