ಕಾಂಗ್ರೆಸ್ಸಿನ 8 ಮಂದಿ ಮುಖಂಡರು ಅಮಾನತು!

ಕೋಲಾರ: ಜಿಲ್ಲೆಯ ಕಾಂಗ್ರೆಸ್ ಪಕ್ಷದ 8 ಮಂದಿ ಮುಖಂಡರನ್ನು ಅಮಾನತು ಮಾಡಲಾಗಿದೆ. ಮುಳಬಾಗಿಲು ಜಿಲ್ಲಾ ಪಂಚಾಯ್ತಿಯ 3 ಸದಸ್ಯರು ಸೇರಿದಂತೆ 8 ಮಂದಿಯನ್ನು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೆ.ಚಂದ್ರಾರೆಡ್ಡಿ ಅಮನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

ಯಾರೆಲ್ಲ ಅಮಾನತು?
ಜಿಲ್ಲಾ ಪಂಚಾಯ್ತಿ ಸದಸ್ಯ ಪ್ರಕಾಶ್ ರಾಮಚಂದ್ರ, ನಾಗಮಣಿ, ಕೃಷ್ಣಪ್ಪ, ಎಪಿಎಂಸಿ ಸದಸ್ಯ ವಿವೇಕಾನಂದ, ಪಿಎಲ್ ಡಿ ಬ್ಯಾಂಕ್ ಅಧ್ಯಕ್ಷ ಗಂಗಿರೆಡ್ಡಿ, ಮಾಜಿ ಅಧ್ಯಕ್ಷ ಶ್ರೀನಾಥ್, ತಾ.ಪಂ ಸದಸ್ಯ ಶ್ರೀನಿವಾಸ್, ಎಂಪಿಸಿಎಸ್ ಅಧ್ಯಕ್ಷ ಮಂಜುನಾಥ್ ಅಮಾನತಾಗಿದ್ದಾರೆ.

ಅಮಾನತು ಯಾಕೆ?
ಪಕ್ಷ ವಿರೋಧಿ ಚಟುವಟಿಕೆ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಕೆ.ಎಚ್.ಮುನಿಯಪ್ಪ ವಿರುದ್ಧ ಪ್ರಚಾರ ನಡೆಸಿದ್ದ ಹಿನ್ನಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಅಲ್ಲದೆ ಬಿಜೆಪಿ ಪಕ್ಷದ ಅಭ್ಯರ್ಥಿ ಮುನಿಸ್ವಾಮಿ ಪರವಾಗಿ ಅಧಿಕೃತವಾಗಿ ಪ್ರಚಾರ ಮಾಡುತ್ತಿದ್ದರು ಎನ್ನಲಾಗಿದೆ. ಈ ಎಲ್ಲಾ ಕಾರಣಗಳಿಂದ 8 ಮಂದಿಯನ್ನು ಇದೀಗ ಪಕ್ಷದಿಂದ ಉಚ್ಛಾಟಿಸಲಾಗಿದೆ ಎಂಬುದಾಗಿ ತಿಳಿದುಬಂದಿದೆ. ಇದನ್ನೂ ಓದಿ:  ಬೆಳಗಾವಿಯಲ್ಲಿ ಕಾಂಗ್ರೆಸ್‍ಗೆ ಶಾಕ್

Comments

Leave a Reply

Your email address will not be published. Required fields are marked *