ಕಾರು ಅಪಘಾತದಿಂದ ಬಚಾವ್ – ಅಂಬುಲೆನ್ಸ್ ಆಕ್ಸಿಡೆಂಟ್‍ನಲ್ಲಿ 8 ಮಂದಿ ದುರ್ಮರಣ

ತಿರುವನಂತಪುರಂ: ಅಂಬುಲೆನ್ಸ್ ಹಾಗೂ ಲಾರಿಯ ಮಧ್ಯೆ ನಡೆದ ಅಪಘಾತದಿಂದ ಆಸ್ಪತ್ರೆಗೆ ಹೋಗುತ್ತಿದ್ದ ಎಂಟು ಜನರು ಮೃತಪಟ್ಟಿರುವ ಘಟನೆ ಕೇರಳದ ಪಾಲಕ್ಕಾಡ್ ನಗರದಲ್ಲಿ ನಡೆದಿದೆ.

ಈ ಘಟನೆ ಭಾನುವಾರ ನಡೆದಿದ್ದು, ಕಾರು ಅಪಘಾತದಲ್ಲಿ ಗಾಯಗೊಂಡವರನ್ನು ಅಂಬುಲೆನ್ಸ್ ಮೂಲಕ ಪಾಲಕ್ಕಾಡ್ ನಲ್ಲಿರುವ ಆಸ್ಪತ್ರೆಗೆ ದಾಖಲಿಸಲೆಂದು ಕರೆದುಕೊಂಡು ಹೋಗಲಾಗುತ್ತಿತ್ತು.

ಹೀಗೆ ಆಸ್ಪತ್ರೆ ಕಡೆ ಹೋಗುತ್ತಿದ್ದ ಅಂಬುಲೆನ್ಸ್ ಗೆ ಲಾರಿ ಡಿಕ್ಕಿ ಹೊಡೆದಿದೆ. ಪರಿಣಾಮ ಎಂಟು ಜನ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಜನರ ಗುಂಪೊಂದು ಕಾರಿನಲ್ಲಿ ನೆಲ್ಲಿಯಂಪತಿಗೆ ಪ್ರವಾಸಕ್ಕೆ ಹೋಗಿತ್ತು. ದಾರಿ ಮಧ್ಯೆ ಕಾರು ಅಪಘಾತಕ್ಕೀಡಾಗಿದೆ. ಈ ಅಪಘಾತದಲ್ಲಿ ಸಣ್ಣ-ಪುಟ್ಟ ಗಾಯಗೊಂಡಿದ್ದ ಗಾಯಾಳುಗಳನ್ನು ನೆನ್ಮರಾದ ಪ್ರಾಥಮಿಕ ಚಿಕಿತ್ಸೆ ಕೊಡಿಸಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಪಾಲಕ್ಕಾಡ್‍ನಲ್ಲಿರುವ ಜಿಲ್ಲಾ ಆಸ್ಪತ್ರೆಗೆ ಆಂಬುಲೆನ್ಸ್ ನಲ್ಲಿ ಕರೆದುಕೊಂಡು ಹೋಗಲಾಗುತ್ತಿತ್ತು.

ಈ ವೇಳೆ ಆಂಬುಲೆನ್ಸ್ ಮತ್ತು ಲಾರಿ ಮಧ್ಯೆ ಮತ್ತೆ ಅಪಘಾತ ಸಂಭವಿಸಿದೆ. ಪರಿಣಾಮ 8 ಮಂದಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಸದ್ಯಕ್ಕೆ ಅಂಬುಲೆನ್ಸ್ ನಲ್ಲಿದ್ದ ಓರ್ವ ಮತ್ತು ಲಾರಿ ಚಾಲಕ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಬಗ್ಗೆ ಮಾಹಿತಿ ತಿಳಿದ ತಕ್ಷಣ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ.

Comments

Leave a Reply

Your email address will not be published. Required fields are marked *