ಮೊಬೈಲ್ ಬ್ಲಾಸ್ಟ್ – ಪ್ರಾಣಾಪಾಯದಿಂದ ಯುವಕ ಪಾರು

ಬಳ್ಳಾರಿ: ಮಾತನಾಡುತ್ತಿದ್ದಾಗ ಮೊಬೈಲ್ ಬ್ಲಾಸ್ಟ್ (Mobile Blast) ಆದ ಘಟನೆ ವಿಜಯನಗರ ಜಿಲ್ಲೆಯ (Vijayanagara District) ಕೂಡ್ಲಿಗಿ ತಾಲೂಕು, ಗೆದ್ಲಗಟ್ಟೆ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಯುವಕ ಪವನ್ ಮನೆಯಲ್ಲಿ ಆಪ್ತರಿಗೆ ಕರೆ ಮಾಡಿ ಮಾತನಾಡುತ್ತಿದ್ದರು. ಈ ವೇಳೆ ಏಕಾಏಕಿ ಮೊಬೈಲ್ ಬ್ಲಾಸ್ಟ್ ಆಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.  ಇದನ್ನೂ ಓದಿ: ಮಹಾರಾಷ್ಟ್ರದ ಹೆದ್ದಾರಿಯಲ್ಲಿ ವಿಶ್ವದಲ್ಲೇ ಮೊದಲ ಬಿದಿರಿನ ತಡೆಗೋಡೆ ಸ್ಥಾಪನೆ – ನಿತಿನ್‌ ಗಡ್ಕರಿ

ಸ್ಫೋಟಗೊಂಡ ಪರಿಣಾಮ ಪವನ್ ಅವರ ಮುಖ ಮತ್ತು ಕಣ್ಣಿಗೆ ಗಂಭೀರವಾದ ಗಾಯಗಳಾಗಿವೆ. ಕೂಡಲೇ ಪವನ್ ಅವರನ್ನು ತಂದೆ ಹತ್ತಿರದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ದೊಡ್ಡ ಶಬ್ಧದೊಂದಿಗೆ ಸ್ಫೋಟಗೊಂಡ ಮೊಬೈಲ್‌ ಹೊತ್ತಿ ಉರಿದು ಕ್ಷಣ ಮಾತ್ರದಲ್ಲಿ ಸುಟ್ಟು ಕರಕಲಾಗಿದೆ.

Comments

Leave a Reply

Your email address will not be published. Required fields are marked *