ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿ

ಬೆಂಗಳೂರು: ಚುನಾವಣೆ (Elections) ಘೋಷಣೆಗೂ ಮುನ್ನ ಬೆಂಗಳೂರಿನ (Bengaluru) ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬಿಜಿಎಸ್ ಆಟದ ಮೈದಾನದಲ್ಲಿ ಶುಕ್ರವಾರ ಬಿಜೆಪಿ (BJP) ಮತ್ತು ಕಾಂಗ್ರೆಸ್ (Congress) ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿದೆ.

ಕಾಂಗ್ರೆಸ್, ಮಹಿಳೆಯರಿಗೆ ಸ್ಕೂಟರ್ ಗಿಫ್ಟ್ ಆಮಿಷ (Gift Politics) ಒಡ್ಡುತ್ತಿದೆ ಎಂದು ಆರೋಪಿಸಿ ಬಿಜೆಪಿ ಪ್ರತಿಭಟನೆ ನಡೆಸಿತ್ತು. ಇದನ್ನೂ ಓದಿ: ಇತಿಹಾಸದ ಪುಟ ತೆರೆದು ನೋಡಿದ್ರೆ ಉರಿಗೌಡ, ನಂಜೇಗೌಡನ ಹೆಸರಿದೆ: ಶೋಭಾ ಕರಂದ್ಲಾಜೆ

ಈ ವಿಚಾರಕ್ಕೆ ಸಂಬಂಧಿಸಿದಂತೆ ಬಿಜಿಎಸ್ ಆಟದ ಮೈದಾನದಲ್ಲಿ ಎರಡು ಪಕ್ಷಗಳ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದ್ದು, ಕಲ್ಲು ತೂರಾಟ ಆಗಿದೆ. ಉದ್ರಿಕ್ತರನ್ನು ಚದುರಿಸಲು ಪೊಲೀಸರು ಹರಸಾಹಸ ನಡೆಸಿದ್ದಾರೆ. ಇದನ್ನೂ ಓದಿ: ಉರಿಗೌಡ, ನಂಜೇಗೌಡ ಟಿಪ್ಪುವನ್ನ ಕೊಂದಿರೋದು ಸತ್ಯ – ಸಿ.ಟಿ ರವಿ

ಬಿಜಿಎಸ್ ಗ್ರೌಂಡ್‌ನಲ್ಲಿ (BGS Ground) ಇದೇ ಭಾನುವಾರ ಕಾಂಗ್ರೆಸ್ ಕಾರ್ಯಕ್ರಮ ಹಮ್ಮಿಕೊಂಡಿದೆ. ಶುಕ್ರವಾರ ವೇದಿಕೆ ಸಿದ್ಧಪಡಿಸಲು ಕಾಂಗ್ರೆಸ್ ಕಾರ್ಯಕರ್ತರು ತೆರಳಿದಾಗ ಈ ಘಟನೆ ನಡೆದಿದೆ. ಅರುಣ್ ಸೋಮಣ್ಣ (Arun Somanna) ತಮ್ಮ ಬೆಂಬಲಿಗರ ಜೊತೆ ಬಂದು ಗಲಾಟೆ ನಡೆಸಿದ್ದಾರೆ ಅಂತಾ ಕಾಂಗ್ರೆಸ್ ಆರೋಪಿಸಿದೆ.

Comments

Leave a Reply

Your email address will not be published. Required fields are marked *